ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಹಾಗೂ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ.ಬೈಯ್ಯಾರೆಡ್ಡಿ ನಿಧನರಾಗಿದ್ದಾರೆ.
ಶನಿವಾರ ಮುಂಜಾನೆ 3 ಗಂಟೆ ಸಮಯದಲ್ಲಿ ಬೆಂಗಳೂರಿನ ಜಯನಗರ ಮೂರನೇ ಬ್ಲಾಕ್ ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕೋಲಾರ ಜಿಲ್ಲೆಯವರಾಗಿದ್ದ ಬೈಯ್ಯಾರೆಡ್ಡಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾಗಿದ್ದರು. ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರ ನಡುವೆಯೂ ಹೋರಾಟಗಳಲ್ಲಿ ಭಾಗಿಯಾಗಿದ್ದರು.


