Monday, March 16, 2026
Google search engine
Homeಮುಖಪುಟಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ನಿಧನ-ಸಿಎಂ ಸಿದ್ದರಾಮಯ್ಯ ಸಂತಾಪ

ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ನಿಧನ-ಸಿಎಂ ಸಿದ್ದರಾಮಯ್ಯ ಸಂತಾಪ

ಹಾಲಕ್ಕಿ ಸಮುದಾಯದ ಜಾನಪದ ಕೋಗಿಲೆ, ಪದ್ಮಶ್ರೀ ಪುರಸ್ಕೃತ ಹಿರಿಯ ಹಾಡುಗಾರ್ತಿ ಸುಕ್ರಿ ಬೊಮ್ಮಗೌಡ ಅವರು ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು.

ಉತ್ತರ ಕನ್ನಡ ಜಿಲ್ಲೆಯ ಸುಕ್ರಜ್ಜಿ ಎಂದೇ ಖ್ಯಾತರಾಗಿದ್ದ ಸುಕ್ರಿ ಬೊಮ್ಮಗೌಡ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.ಕೆಲವು ದಿನಗಳ ಹಿಂದೆ ಉಡುಪಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು.

ಆದರೆ ಇಂದು ಮುಂಜಾನೆ 4 ಗಂಟೆ ಸಮಯದಲ್ಲಿ ಅಂಕೋಲದ ಬಡಿಗೇರಿಯ ಅವರ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಸುಕ್ರಿ ಬೊಮ್ಮಗೌಡ ಅವರು ಇಬ್ಬರು ಮೊಮ್ಮಕ್ಕಳು, ಓರ್ವ ಸೊಸೆಯನ್ನು ಅಗಲಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಹಾಲಕ್ಕಿ ಒಕ್ಕಲಿಗ ಜನಾಂಗಕ್ಕೆ ಸೇರಿದ ಸುಕ್ರಿ ಬೊಮ್ಮಗೌಡ ಸುಪ್ರಸಿದ್ದ ಜಾನಪದ ಗಾಯಕಿಯಾಗಿದ್ದರು. ಸುಮಾರು 5 ಸಾವಿರ ಹಾಲಕ್ಕಿ ಹಾಡುಗಳನ್ನು ಹಾಡುತ್ತಿದ್ದರು. ಅವರು ಜಾನಪದ ಕಲೆಗೆ ನೀಡಿದ ಕೊಡುಗೆಗಳಿಗಾಗಿ ಮತ್ತು ಸಾಂಪ್ರದಾಯಿಕ ಬುಡಕಟ್ಟ ಸಂಗೀತವನ್ನು ಸಂರಕ್ಷಿಸುವ ಕೆಲಸಕ್ಕಾಗಿ ಹಲವು ಪ್ರಶಸ್ತಿಗಳನ್ನು ಗಳಿಸಿದ್ದಾರೆ.

ಮುಖ್ಯಮಂತ್ರಿ ಸಂತಾಪ:

ಪ್ರಖ್ಯಾತ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಅವರ ನಿಧನ‌ದಿಂದ ಸಾಂಸ್ಕೃತಿಕ ಲೋಕಕ್ಕೆ ಆಗಿರುವ ನಷ್ಟ ತುಂಬಲು ಸಾಧ್ಯವಿಲ್ಲ. ಅವರೊಬ್ಬರು ಹುಟ್ಟು ಕಲಾವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಹಾಲಕ್ಕಿ ಜಾನಪದ ಹಾಡುಗಳ ಮೂಲಕವೇ ಲೋಕಪ್ರಸಿದ್ಧರಾಗಿದ್ದ “ಸುಕ್ರಜ್ಜಿ” ಅವರಿಗೆ ಸಂಗೀತವೇ ಬದುಕಾಗಿತ್ತು. ಸಂಗೀತದ ಜೊತೆಯಲ್ಲಿ ಮಧ್ಯಪಾನ ವಿರೋಧಿ ಆಂದೋಲನದಲ್ಲಿಯೂ ಸಕ್ರಿಯರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ಬದುಕು ಮತ್ತು ಸಾಧನೆ ಆದರ್ಶಪ್ರಾಯವಾದುದು ಎಂದು ಹೇಳಿದ್ದಾರೆ.

ಸಂಗೀತ ಕಲಾಸೇವೆಗಾಗಿ ಪದ್ಮಶ್ರೀ‌ ಪ್ರಶಸ್ತಿ ಗಳಿಸಿದ್ದ ಸುಕ್ರಜ್ಜಿ ಅವರು ಹಂಪಿ ವಿಶ್ವವಿದ್ಯಾಲಯ ನೀಡುವ ನಾಡೋಜ ಪ್ರಶಸ್ತಿಯೂ ಸೇರಿದಂತೆ ಹಲವಾರು ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು ಎಂದಿದ್ದಾರೆ/

ಸುಕ್ರಿ ಬೊಮ್ಮಗೌಡ ಅವರನ್ನು ಕಳೆದುಕೊಂಡಿರುವ ಬಂಧು ಮಿತ್ರರ ದು:ಖದಲ್ಲಿ ನಾನೂ‌ ಪಾಲ್ಗೊಂಡಿದ್ದೇನೆ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular