Thursday, January 29, 2026
Google search engine
Homeಮುಖಪುಟದಲಿತರಿಗೆ ಗುತ್ತಿಗೆಯಲ್ಲಿ ಮೀಸಲಾತಿ: ರೂ. 2 ಕೋಟಿವರೆಗೆ ವಿಸ್ತರಣೆ ಮಾಡಲು ಪರಿಶೀಲನೆ -ಸಿಎಂ ಭರವಸೆ

ದಲಿತರಿಗೆ ಗುತ್ತಿಗೆಯಲ್ಲಿ ಮೀಸಲಾತಿ: ರೂ. 2 ಕೋಟಿವರೆಗೆ ವಿಸ್ತರಣೆ ಮಾಡಲು ಪರಿಶೀಲನೆ -ಸಿಎಂ ಭರವಸೆ

ಶೋಷಿತರ, ದಲಿತ ಸಮಯದಾಯಗಳ ಬೇಡಿಕೆಗಳನ್ನು ನಾನು ಮುಖ್ಯಮಂತ್ರಿ ಆದ ಬಳಿಕ ನಿರಂತರವಾಗಿ ಈಡೇರಿಸುತ್ತಲೇ ಇದ್ದೇನೆ.

ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನ ಅಭಿವೃದ್ಧಿ ಹಣದಲ್ಲಿ ಶೇ24 ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದು ನಮ್ಮ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಲಿತ ಮುಖಂಡರುಗಳೊಂದಿಗಿನ ಬಜೆಟ್ ಪೂರ್ವ ಸಭೆಯಲ್ಲಿ ಮಾತನಾಡಿದ ಅವರು, ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ.

ದಲಿತ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಾವು ಮಾತ್ರ. ಇದನ್ನು 2 ಕೋಟಿಗೆ ವಿಸ್ತರಿಸಬೇಕು ಎನ್ನುವ ಬೇಡಿಕೆ ಬಗ್ಗೆಯೂ ಪರಿಶೀಲಿಸುತ್ತೇನೆ ಎಂದು ಭರವಸೆ ನೀಡಿದರು.

ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು ಮಾತ್ರ.‌ ಪಿಟಿಸಿಎಲ್ ಕಾಯ್ದೆ ಮಾಡಿದ್ದು ನಾವು. ಹೊಸದಾಗಿ ಕೈಗಾರಿಕೆ ಆರಂಭಿಸುವವರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಿದ್ದೇವೆ. ಇಡೀ ದೇಶಕ್ಕೆ ಮಾದರಿಯಾದ ಕಾಯ್ದೆ, ಕಾನೂನು, ನಿಯಮಗಳನ್ನು ಮಾಡಿರುವ ದಾಖಲೆ ನಮ್ಮ ಸರ್ಕಾರದ್ದಾಗಿದೆ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular