ರಾಜ್ಯದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ಎತ್ತಿನಹೊಳೆ ಯೋಜನೆಯಡಿ ತುಮಕೂರು ಜಿಲ್ಲೆಯ ಮಧುಗಿರಿ ಮತ್ತು ಕೊರಟಗೆರೆ ತಾಲೂಕಿನ ಹಲವು ಕೆರೆಗಳಿಗೆ ನೀರು ಹರಿಸಿ ತುಂಬಿಸಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಲಕ್ಷ್ಮಿ ಯೋಜನೆಗೆ 26,608 ಕೋಟಿ ಅನುದಾನ, ಗೃಹಜ್ಯೋತಿ ಯೋಜನೆಗೆ 10,100 ಕೋಟಿ ರೂ ಮೀಸಲಿಟ್ಟಿದ್ದಾರೆ. ಶಕ್ತಿ ಯೋಜನೆಗೆ 5,300 ಅನುದಾನ ಮೀಸಲಿಟ್ಟಿದ್ದಾರೆ.
ಅಲ್ಪಸಂಖ್ಯಾತ ಕಾಲೋನಿಗಳ ಅಭಿವೃದ್ಧಿಗೆ 1 ಸಾವಿರ ಕೋಟಿ
ಅಲ್ಪಸಂಖ್ಯಾತರ ಸ್ಟಾರ್ಟಪ್ ಗಳಿಗೆ ಆರ್ಥಿಕ ನೆರವು
ನೂರು ಉರ್ದು ಶಾಲೆಗಳೀಗೆ ಹೈಟೆಕ್ ಸ್ಪರ್ಶ
ವಕ್ಫ್ ಅಭಿವೃದ್ದಿಗೆ 150 ಕೋಟಿ ಅನುದಾನ ಮೀಸಲು
ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ವಸತಿ ಶಾಲೆ
ಕೆಲಸದ ಸಮಯದಲ್ಲಿ ಮೃತಪಟ್ಟ ಕಾರ್ಮಿಕರಿಗೆ ಪರಿಹಾರ ಹೆಚ್ಚಳ
ಪರಿಹಾರ ಧನ 5 ರಿಂದ 8 ಲಕ್ಷಕ್ಕೆ ಏರಿಕೆ ಮಾಡಿದ ಸರ್ಕಾರ
ಮೈಸೂರಿನಲ್ಲಿ ಹೈಟೆಕ್ ಮತ್ಸ್ಯದರ್ಶಿನಿ ಪ್ರಾರಂಭ
ಕೆಇಎ ಮೂಲಕ ಅಡ್ಮಿಷನ್ ಮಾಡಿದರೆ ಶೇ.50ರಷ್ಟು ವಿನಾಯಿತಿ
ರಾಜ್ಯದಲ್ಲಿ ಹೊಸ ಮೀನುಗಾರಿಕಾ ನೀತಿ ಜಾರಿಗೆ
ತೊಗರಿ ಬೆಳೆಯ ಉತ್ತೇಜನಕ್ಕೆ 88 ಕೋಟಿ ರೂ ಪ್ರೋತ್ಸಾಹ ಧನ
ರಾಜ್ಯದಲ್ಲಿ 5 ಸಾವಿರ ಕಿರು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ
ಸಾವಯವ ಸಿರಿಧಾನ್ಯಗಳ ಹಬ್ ಸ್ಥಾಪನೆಗೆ 20 ಕೋಟಿ ರೂ ಅನುದಾನ
ಪಶುಸಂಗೋಪನೆ ಮತ್ತು ಮೀನುಗಾರಿಕೆಗೆ 3,977 ಕೋಟಿ ಮೀಸಲು
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ 8,275 ಕೋಟಿ
ಲೋಕೋಪಯೋಗಿ ಇಲಾಖೆಗೆ 11,814 ಕೋಟಿ
ಕಂದಾಯ ಇಲಾಖೆಗೆ 17,201 ಕೋಟಿ ಅನುದಾನ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,473 ಕೋಟಿ
ನೀರಾವರಿ ಇಲಾಖೆಗೆ 22,181 ಕೋಟಿ ಅನುದಾನ ಮೀಸಲು
ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 21,405 ಕೋಟಿ ಅನುದಾನ
ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 20,625 ಕೋಟಿ ಅನುದಾನ
ಶಿಕ್ಷಣ ಇಲಾಖೆಗೆ 45,286 ಕೋಟಿ ಅನುದಾನ ಮೀಸಲು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,955 ಕೋಟಿ
ಗ್ರಾಮೀಣಾಭಿವೃದ್ಧಿ ಇಲಾಖೆಗೆ 26,735 ಕೋಟಿ ಅನುದಾನ
ಸಮಾಜ ಕಲ್ಯಾಣ ಇಲಾಖೆಗೆ 16,955 ಕೋಟಿ


