Monday, March 16, 2026
Google search engine
Homeಮುಖಪುಟಚೌಧರ್ ಕೆರೆ ನೀರು ಮುಟ್ಟುವ ಐತಿಹಾಸಿಕ ಚಳವಳಿ ಮಹಾಡ್ ಸತ್ಯಾಗ್ರಹ

ಚೌಧರ್ ಕೆರೆ ನೀರು ಮುಟ್ಟುವ ಐತಿಹಾಸಿಕ ಚಳವಳಿ ಮಹಾಡ್ ಸತ್ಯಾಗ್ರಹ

ಸಂಪ್ರದಾಯ, ಕಟ್ಟುಪಾಡುಗಳ ಹೆಸರಿನದಲ್ಲಿ ಈ ನೆಲದ ದಲಿತರನ್ನು ಪ್ರಾಣಿ, ಪಕ್ಷಿಗಳಿಗಿಂತಲೂ ಕೀಳಾಗಿ ಕಾಣುತ್ತಿದ್ದ ಚಾರ್ತುವರ್ಣದ ವ್ಯವಸ್ಥೆಯ ವಿರುದ್ದ ಮೊದಲ ಹೋರಾಟವೇ ಮಹಾಡ್‌ನ ಚೌಧರ್ ಕೆರೆ ನೀರು ಮುಟ್ಟುವ ಐತಿಹಾಸಿಕ ಚಳವಳಿಯಾಗಿದೆ ಎಂದು ಚರಕ ಆಸ್ಪತ್ರೆಯ ವೈದ್ಯ ಡಾ.ಬಸವರಾಜು ತಿಳಿಸಿದ್ದಾರೆ.
ತುಮಕೂರು ನಗರದ ಜಿಲ್ಲಾಸ್ಪತ್ರೆ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ತುಮಕೂರು ಜಿಲ್ಲಾ ಸಮಿತಿ, ರಾಜ್ಯ ಸಮಿತಿಯ ಸದಸ್ಯರಾದ ಕುಂದೂರು ತಿಮ್ಮಯ್ಯ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಭಾರತದ ಅಸ್ಪೃಷ್ಯರ ಮೊದಲ ಪ್ರತಿರೋಧ ಚಳವಳಿ ಮಹಾಡ್ ಸತ್ಯಾಗ್ರಹ ನೆನಪು. ಕಾರ್ಯಕ್ರಮಕ್ಕೆ, ಮನುಸೃತಿಯ ಹಾಳೆಗಳನ್ನು ಹರದು, ಗಿಡಕ್ಕೆ ನೀರೇರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಹಣಬಲ, ತೋಳ್ಬಲಗಳಿಂತ, ಬುದ್ದಿಬಲದ ಮೂಲಕವೇ ಪ್ರಕೃತಿಯಲ್ಲಿನ ಎಲ್ಲಾ ವಸ್ತುಗಳ ಮೇಲೆ ದಲಿತರಿಗೂ ಸಮಾನ ಹಕ್ಕಿದೆ ಎಂದು ಪ್ರತಿಪಾದಿಸಿದ ಮಹತ್ವದ ದಿನವಿದು. ಇದರ ಜೊತೆಗೆ, ಈ ಅಸಮಾನತೆಗೆ ಕಾರಣವಾದ ಮನುಸೃತಿಯನ್ನು ಸುಡುವ ಮಹತ್ವದ ಕ್ರಾಂತಿಗೆ ಮುನ್ನುಡಿ ಬರೆದ ದಿನ ಹಾಗಾಗಿಯೇ ಇಂದು ಜಾರ್ತುವರ್ಣದ ಮೂಲವಾದ ಮನುಸೃತಿಯನ್ನು ಸುಟ್ಟು,ಸಮಾನತೆಯ ಸಂಕೇತವಾದ ಪ್ರಕೃತಿಗೆ ನೀರೇರುವ ಮೂಲಕ ಈ ದಿನವನ್ನು ನೆನಪು ಮಾಡಿಕೊಂಡಿದ್ದೇವೆ ಎಂದರು.
ಸಹ ಪ್ರಾಧ್ಯಾಪಕ ಡಾ.ನಾಗಭೂಷಣ್ ಬಗ್ಗನಡು ಮಾತನಾಡಿ, ಮಹಾಡ್ ಕೆರೆ ನೀರು ಮುಟ್ಟಿದ ದಿನ, ದಲಿತರ ಅರಿವಿನ ಪ್ರಜ್ಞೆ ವಿಸ್ತರಣೆಯಾದ ದಿನ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಕ್ತ ರಹಿತ ಕ್ರಾಂತಿಯ ಮೂಲಕ ಪ್ರಕೃತಿಯ ಮೇಲೆ ದಲಿತ ಸಮುದಾಯದ ಹಕ್ಕು ಪ್ರತಿಪಾದಿಸಿದ ದಿನ. ಭಾರತದ ದಲಿತರ ಪಾಲಿಗೆ 1927ರ ಮಾರ್ಚ 20ರಂದು ಮಹಾಡ್‌ನ ಚೌದರ್ ಕೆರೆ ನೀರು ಮುಟ್ಟುವುದು ಮತ್ತು ಡಿಸೆಂಬರ್ 27 ರಂದು ಮನುಸೃತಿಯನ್ನು ಸುಟ್ಟು ಹಾಕುವ ಮೂಲಕ ಭೌತಿಕವಾಗಿ ಮತ್ತು ಬೌದ್ಧಿಕವಾಗಿ ದಲಿತರನ್ನು ಎಚ್ಚರಿಸಿದ ವರ್ಷ ಎಂದರು.
ಸಾಮಾಜಿಕ ಹೋರಾಟಗಾರ ವಿ.ಎಲ್.ನರಸಿಂಹಮೂರ್ತಿ ಮಾತನಾಡಿ, ಚೌದರ್ ಕೆರೆಯ ನೀರು ಮುಟ್ಟುವ ಮೂಲಕ ನಡೆದ ದಲಿತರ ಹಕ್ಕು ಪ್ರತಿಪಾದನಾ ಚಳವಳಿ ನಡೆದು ಶತಮಾನಗಳಾಗತ್ತಾ ಬಂದಿದ್ದರೂ ಇಂದಿಗೂ ದಲಿತರು ತಮ್ಮ ಹಕ್ಕುಗಳನ್ನು ಸ್ಥಾಪಿಸಲು ಮುಂದಾದಾಗ ದೌರ್ಜನ್ಯ, ದಬ್ಬಾಳಿಕೆಗಳಿಗೆ ಒಳಗಾಗುತ್ತಲೇ ಇದ್ದಾರೆ. ನೀರು, ಆಹಾರ, ಭೂಮಿ, ಸ್ಮಶಾನದಂತಹ ವಿಚಾರಗಳಲ್ಲಿ ಇಂದಿಗೂ ಘರ್ಷಣೆಗಳು ನಡೆಯುತ್ತಲೇ ಇವೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಸಮಿತಿ ಸದಸ್ಯ ಕುಂದೂರು ತಿಮ್ಮಯ್ಯ ವಹಿಸಿದ್ದರು.ಗುಬ್ಬಿ ತಾಲೂಕು ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಚೇಳೂರು ಶಿವನಂಜಪ್ಪ ಹಾಗೂ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಕುಪ್ಪೂರು ಶ್ರೀಧರ್ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ದಸಂಸ ಸಂಚಾಲಕ ವಿರೂಪಾಕ್ಷ ಡ್ಯಾಗೇರಹಳ್ಳಿ, ಉಮಾಪ್ರಗತಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಕೆಂಪರಾಜು, ಕೆಇಬಿ ದಲಿತ ನೌಕರರ ಒಕ್ಕೂಟದ ಸೋಮಶೇಖರ್ ಮತ್ತಿಹಳ್ಳಿ, ಕರ್ನಾಟಕ ಲಲಿತ ಕಲಾ ಆಕಾಡೆಮಿಯ ಮನುಚಕ್ರವರ್ತಿ, ದಸಂಸ ಜಿಲ್ಲಾ ಸಂಚಾಲಕ ಕುಂದೂರು ಮುರುಳಿ, ಕೆ.ಹೆಚ್.ರಂಗನಾಥ ಕಂಟಲಗೆರೆ, ಶ್ರೀನಿವಾಸ್ ಹೆಗ್ಗೆರೆ, ಮಂಚಲದೊರೆ ಭಾಗ್ಯಮ್ಮ, ಶಿವಮ್ಮ ಬಿ.ಹೆಚ್.ಕಾವಲ್ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular