ಸಂಸತ್ ನಲ್ಲಿ ವಕ್ಸ್ ತಿದ್ದುಪಡಿ 2024 ಮಸೂದೆಯನ್ನು ಮಂಡಿಸಲಾಗಿದ್ದು, ಈ ಮಸೂದೆ ಸಂವಿಧಾನ ವಿರೋಧಿಯಾಗಿದೆ. ಸಮುದಾಯದ ಹಕ್ಕುಗಳಿಗೆ ಧಕ್ಕೆ ತರುವಂತಿದೆ ಎಂದು ವೆಲ್ವೇರ್ ಪಾರ್ಟಿ ಆಫ್ ಇಂಡಿಯಾದ ತುಮಕೂರು ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಆರೋಪಿಸಿದ್ದಾರೆ.
ವಕ್ಫ್ ತಿದ್ದುಪಡಿ ಮಸೂದೆ ಭಾರತದ ಸಂವಿಧಾನದ ಮೇಲಿನ ದಾಳಿಯಾಗಿದೆ. ಅವಮಾನಿಸಲು, ಅವರ ಹಕ್ಕುಗಳನ್ನು ಕಿತ್ತುಕೊಳ್ಳುವುದು ಕೇಂದ್ರ ಸರ್ಕಾರದ ಹುನ್ನಾರವಾಗಿದೆ. ಭಾರತೀಯ ಸಮಾಜವನ್ನು ವಿಭಜಿಸುವ ಗುರಿ ಹೊಂದಿದ್ದರಿಂದ 2024ರ ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕದೆ ರದ್ದುಗೊಳಿಸುವಂತೆ ಒತ್ತಾಯಿಸಿದರು.
ಇಸ್ಲಾಂ ಕಾನೂನಿನ್ವಯ ವಕ್ಫ್ ಎಂದರೆ ಧಾರ್ಮಿಕ ಮತ್ತು ದತ್ತಿ ಉದ್ದೇಶಗಳಿಗಾಗಿ ದೇವರ ಹೆಸರಿನಲ್ಲಿ ಅರ್ಪಿಸಲಾದ ಆಸ್ತಿಯಾಗಿದೆ. ವಕ್ಫ್ ಆದಾಯವನ್ನು ಮಸೀದಿಗಳ ನಿರ್ವಹಣೆ, ಸಮುದಾಯದ ಬಡ ಜನರ ಅಭಿವೃದ್ಧಿಗೆ ಬಳಸಲಾಗುತ್ತದೆ ಎಂದು ಹೇಳಿದರು.
ಮುಸ್ಲಿಮ್ ಮಹಿಳೆಯರ ಮತ್ತು ಬಡ ಮುಸಲ್ಮಾನರಿಗಾಗಿ ಈ ತಿದ್ದುಪಡಿ ಎನ್ನುವವರ ಪಾರ್ಟಿ ಎಲ್ಲಿ ಒಂದು ಮಹಿಳೆ ಸಂಸದೆ ಇಲ್ಲಾ ಬಡ ಮುಸಲ್ಮಾನರಿಗೆ ಜಾತ್ರೆ ದೇವಸ್ಥಾನ ಮುಗಟ್ಟುಗಳಲ್ಲಿ ವ್ಯಾಪಾರ ವಹಿವಾಟು ನಡೆಸಲು ವಿರೋಧಿಸುವವರು ಅಲ್ಪಸಂಖ್ಯಾತರ ಹಕ್ಕುಗಳ ಮಾತಡುತ್ತಿರುವದು ಯಾವ ಹೊನ್ನಾರ ಎಂದು ತಿಳಿಯಬೇಕು ಎಂದಿದ್ದಾರೆ.
ಅಲ್ಪಸಂಖ್ಯಾತರ ಹಕ್ಕುಗಳನ್ನು ಹತ್ತಿಕ್ಕುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಸೂಚಿ ಭಾಗವಾಗಿದೆ. ದೇಶದ ಸುಮಾರು 20 ಕೋಟಿ ಮುಸ್ಲಿಮರು ವಕ್ಸ್ ತಿದ್ದುಪಡಿ ವಿಧೇಯಕ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವಾಗ ಅವರ ಅಹವಾಲು ಆಲಿಸದೆ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಿರುವುದು ಪ್ರಜಾಪ್ರಭುತ್ವಕ್ಕೆ ಎಸಗಿದ ದ್ರೋಹವಾಗಿದೆ ಎಂದರು.


