Sunday, May 18, 2025
Google search engine
Homeಮುಖಪುಟತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಲಾರಿ ಮಾಲಿಕರ ಪ್ರತಿಭಟನೆ

ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಲಾರಿ ಮಾಲಿಕರ ಪ್ರತಿಭಟನೆ

ಡೀಸಲ್ ದರ, ಎಫ್.ಸಿ. ಶುಲ್ಕ ಸೇರಿದಂತೆ ಸಾರಿಗೆ ಇಲಾಖೆಯಲ್ಲಿನ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಾದ್ಯಂತ ಪ್ರತಿಭಟನೆಯನ್ನು ನಡೆಸುತ್ತಿದ್ದು, ಇದರ ಅಂಗವಾಗಿ ಕರ್ನಾಟಕ ಟ್ರೈಲರ್ & ಟ್ರಕ್ ಓನರ್ಸ್ ಅಸೋಸಿಯೇಷನ್ ವತಿಯಿಂದ ಬುಧವಾರ ತುಮಕೂರು ನಗರದ ಕ್ಯಾತ್ಸಂದ್ರ ಬಳಿಯಿರುವ ಟೋಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಂಘದ ರಾಜ್ಯಾಧ್ಯಕ್ಷ ಕೆ.ಆರ್.ರಾಘವೇಂದ್ರ ಮಾತನಾಡಿ, ಡಿಸೆಲ್ ಮೇಲಿನ ಸೆಸ್ ಕಡಿತ, ಅಂತಾರಾಜ್ಯ ಆರ್.ಟಿ.ಓ. ಚೆಕ್ ಪೋಸ್ಟ್ ರದ್ದು, ರಾಜ್ಯ ಹೆದ್ದಾರಿಗಳಲ್ಲಿನ ಟೋಲ್ ಪ್ಲಾಜ್ ಮುಚ್ಚುವುದು, ಸಾರಿಗೆ ವಾಹನಗಳು ನಗರ ಪ್ರವೇಶವನ್ನು ಮುಕ್ತಗೊಳಿಸುವುದು, ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾವು ಪ್ರತಿಭಟನೆಯನ್ನು ನಡೆಸುತ್ತಿದ್ದೇವೆ ಎಂದರು.

ಇತ್ತೀಚಗೆ ಹೆಚ್ಚಳ ಮಾಡಿರುವ ಡೀಸೆಲ್ ಬೆಲೆ ಇಳಿಕೆ ಮಾಡಲೇಬೇಕು. ಏಕೆಂದರೆ ಇದರಿಂದ ಜನ ಸಾಮಾನ್ಯರ ಮೇಲೆ ನೇರ ಹೊರೆ ಬೀಳುತ್ತದೆ, ಡೀಸಲ್ ಬೆಲೆ ಏರಿಕೆಯಿಂದ ಅಗತ್ಯವಸ್ತುಗಳ ಬೆಲೆಗಳಲ್ಲಿಯೂ ಸಹ ಗಣನೀಯ ಏರಿಕೆ ಬರುವುದು ಖಂಡಿತ. ಆದುದರಿಂದ ಜನರ ಮೇಲಿನ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರಗಳು ಡೀಸೆಲ್ ಬೆಲೆಯನ್ನು ಆದಷ್ಟು ಶೀಘ್ರವಾಗಿ ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು. ಕೂಡಲೇ ರಾಜ್ಯ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು, ಇಲ್ಲದಿದ್ದರೆ ಅನಿರ್ಧಿಷ್ಟಾವಧಿ ಮುಷ್ಕರವನ್ನು ಮತ್ತಷ್ಟು ತೀವ್ರ ಸ್ವರೂಪಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದರು.

ಕರ್ನಾಟಕ ಟ್ರೈಲರ್ & ಟ್ರಕ್ ಓನರ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಆರ್ಷಿತ್ ಎನ್, ಕಾರ್ಯದರ್ಶಿ ರಾಧಾಕೃಷ್ಣ ಡಿ., ಜಂಟಿ ಕಾರ್ಯದರ್ಶಿ ಮಂಜುನಾಥ್ ವೈ.ಬಿ., ನಿರ್ದೇಶಕರಾದ ಇರ್ಫಾನ್ ಪಾಷ ಸೇರಿದಂತೆ ಟ್ರೆöÊಲರ್ ಮತ್ತು ಟ್ರಕ್ ಮಾಲೀಕರು ಹಾಗೂ ಚಾಲಕರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular