ಕರ್ನಾಟಕ ರಾಜ್ಯ ವಕೀಲ ಪರಿಷತ್ತಿನ ಮಾಜಿ ಅಧ್ಯಕ್ಷರೂ, ಹಿರಿಯ ವಕೀಲರೂ, ಅಖಿಲ ಭಾರತ ಬಾರ್ ಕೌನ್ಸಿಲ್ ಉಪಾಧ್ಯಕ್ಷ ಸದಾಶಿವರೆಡ್ಡಿ ಅವರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ಕೆಂಪರಾಜಯ್ಯ ನೇತೃತ್ವದಲ್ಲಿ ಎಡ ತೋಳಿಗೆ ಕೆಂಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.
ಸಂಘದ ಆವರಣದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಹಿರಿಯ, ಕಿರಿಯ, ಮಹಿಳಾ ವಕೀಲರು ಮೌನ ಪ್ರತಿಭಟನೆ ಮೂಲಕ ತೆರಳಿ ಸದರಿ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕೆಂದು ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಜಿಲ್ಲಾಧಿಕಾರಿಗಳ ಪರವಾಗಿ ತಹಶೀಲ್ದಾರ್ ಜಿ.ವಿ.ಮೋಹನ್ ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು,
ಈ ಸಂದರ್ಭದಲ್ಲಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಹೆಚ್.ಕೆಂಪರಾಜಯ್ಯ, ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಬಂದಿದ್ದರೂ ಕಕ್ಷಿದಾರರು ವಕೀಲರ ಮೇಲೆ ನಡೆಸಿದ ಹಲ್ಲೆಯನ್ನು ತುಮಕೂರು ಜಿಲ್ಲಾ ವಕೀಲರ ಸಂಘ ತೀವ್ರವಾಗಿ ಖಂಡಿಸುತ್ತದೆ, ತಪ್ಪಿತಸ್ಥರ ಮೇಲೆ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಕ್ರಮವಹಿಸಬೇಕು, ಕಕ್ಷಿದಾರರು ತಮಗೆ ಏನಾದರೂ ತೊಂದರೆ ಆದರೆ ವಕೀಲರೊಂದಿಗೆ ಕುಳಿತು ಚರ್ಚಿಸಿ ತಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕೇ ವಿನಃ ವಕೀಲರ ಮೇಲೆ ಕೈ ಮಾಡಬಾರದು ಎಂದು ಹೇಳಿದರು.
ಪ್ರಧಾನ ಕಾರ್ಯದರ್ಶಿ ಆರ್.ತಿಪ್ಪೇಸ್ವಾಮಿ, ಖಜಾಂಚಿ ಭಾರತಿ, ನೂತನ ಕಮಿಟಿಯ ಉಪಾಧ್ಯಕ್ಷ ಎಂ.ಎಲ್.ರವಿಗೌಡ, ಪ್ರಧಾನ ಕಾರ್ಯದರ್ಶಿ ಮಹೇಶ್ ಹಿರೇಹಳ್ಳಿ, ಜಂಟಿ ಕಾರ್ಯದರ್ಶಿ ಟಿ.ಎಂ.ಧನAಜಯ, ಖಜಾಂಚಿ ಸಿಂಧು.ಬಿ.ಎA. ಗೋವಿಂದರಾಜು.ಪಿ, ಡಿ.ಎ.ಜಗದೀಶ್, ಶ್ರೀನಿವಾಸಮೂರ್ತಿ, ಕೆ.ವಿ.ಶ್ರೀನಿವಾಸಮೂರ್ತಿ ವಿ.ಕೆ,ಸುರೇಶ್.ಎಸ್, ಪದ್ಮಶ್ರೀ.ಸಿ.ಆರ್. ಸೇವಾಪ್ರಿಯ.ಜೆ.ಎಸ್. ಜೆ.ಕೆ.ಅನಿಲ್, ಟಿ.ಎನ್.ಗುರುರಾಜ್, ಮಂಜುನಾಥ್, ಮಲ್ಲಿಕಾರ್ಜುನಯ್ಯ, ಸತೀಶ್ ಇತರರು ಹಾಜರಿದ್ದರು.


