Monday, March 16, 2026
Google search engine
Homeಮುಖಪುಟಅಕ್ರಮ ಗಣಿಗಾರಿಕೆ - ಜನಾರ್ಧನ ರೆಡ್ಡಿಗೆ 7ವರ್ಷ ಶಿಕ್ಷೆ

ಅಕ್ರಮ ಗಣಿಗಾರಿಕೆ – ಜನಾರ್ಧನ ರೆಡ್ಡಿಗೆ 7ವರ್ಷ ಶಿಕ್ಷೆ

ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಗಣಿ ಉದ್ಯಮಿ ಜನಾರ್ಧನ ರೆಡ್ಡಿ ಅವರನ್ನು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿಸಿರುವ ಕೋರ್ಟ್ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ – ಪ್ರತಿವಾದ ಆಲಿಸಿದ್ದ ಹೈದರಾಬಾದ್ ಸಿಬಿಐ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ಸದ್ಯ ಗಂಗಾವತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಜನಾರ್ದನ ರೆಡ್ಡಿ ಅವರಿಗೆ ಕೋರ್ಟ್ ನ ಈ ತೀರ್ಪು ಮುಳುವಾಗುವ ಸಾಧ್ಯತೆಯಿದ್ದು ಅವರು ಶಾಸನ ಸಭಾ ಸದಸ್ಯತ್ವದಿಂದ ಅನರ್ಹರಾಗಲಿದ್ದಾರೆ

ಓಬಳಾಪುರಂ ಮೈನಿಂಗ್ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಹೇಳಿದೆ. 2008ರಿಂದ 2013ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿತ್ತು.

ಈ ಪ್ರಕರಣದಲ್ಲಿ ಓಬಳಾಪುರಂ ಮೈನಿಂಗ್ ಸಂಸ್ಥೆಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಿ.ವಿ.ಶ್ರೀನಿವಾಸ ರೆಡ್ಡಿ, ಆಂಧ್ರ ಪ್ರದೇಶದ ಗಣಿ ಮತ್ತು ಭೂವಿಜ್ಞಾನದ ಮಾಜಿ ನಿರ್ದೇಶಕ ವಿ.ಡಿ.ರಾಜಗೋಪಾಲ್,ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಾಜಿ ಉಪ ನಿರ್ದೇಶಕರಾಗಿದ್ದ ಕೆ.ಮೆಫಾಜ್ ಅಲಿ ಖಾನ್ ಅವರನ್ನು ಕೂಡ ಅಪರಾಧಿಗಳು ಎಂದು ಹೆಸರಿಸಲಾಗಿದ್ದು ಅವರಿಗೂ ಕೂಡ ಶಿಕ್ಷೆ ಪ್ರಕಟಗೊಂಡಿದೆ.

ಇದೇ ಪ್ರಕರಣದಲ್ಲಿ ಆರೋಪಿಗಳು ಎಂದು ಹೆಸರಿಸಲಾಗಿದ್ದ, ಆಂಧ್ರ ಪ್ರದೇಶ ಗಣಿ ಮತ್ತು ಭೂವಿಜ್ಞಾನ ಇಲಾಖೆ ಮಾಜಿ ಸಚಿವೆ ಸಬಿತಾ ಇಂದ್ರಾ ರೆಡ್ಡಿ,ಗಣಿ ಇಲಾಖೆಯ ಮಾಜಿ ಅಧಿಕಾರಿ ಕೃಪಾನಂದಂ ಅವರನ್ನು ಪ್ರಕರಣದಿಂದ ಕೈ ಬಿಡಲಾಗಿದೆ.

2009 ರಲ್ಲಿ ಸಿಬಿಐ ಒಎಂಸಿ ಕಂಪನಿಯ ಅಕ್ರಮ ಗಣಿಗಾರಿಕೆ ಆರೋಪ ಸಂಬಂಧ ತನಿಖೆ ಪ್ರಾರಂಭಿಸಿತ್ತು. ವೈ.ಎಸ್. ರಾಜಶೇಖರ ರೆಡ್ಡಿ ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಗಾಲಿ ಜನಾರ್ದನ ರೆಡ್ಡಿ ಅವರ ಒಎಂಸಿ ಕಂಪನಿಗೆ ಓಬಳಾಪುರಂ ಮತ್ತು ಡಿ. ಹಿರೇಹಾಳದಲ್ಲಿ ಕ್ರಮವಾಗಿ 68.5 ಹೆಕ್ಟೇರ್ ಮತ್ತು 39.5 ಹೆಕ್ಟೇರ್‌ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ಗುತ್ತಿಗೆ ನೀಡುವಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಕೇಳಿ ಬಂದಿತ್ತು. 

ಅಂದಿನ ಗಣಿ ಇಲಾಖೆಯ ಸಹಾಯಕ ನಿರ್ದೇಶಕ ಲಿಂಗಾ ರೆಡ್ಡಿ ಕಬ್ಬಿಣದ ಅದಿರು ಗಣಿಗಾರಿಕೆ ಗುತ್ತಿಗೆ ನೀಡುವ ವೇಳೆ 23 ಅರ್ಜಿದಾರರನ್ನು ನಿರ್ಲಕ್ಷಿಸಿ, ಒಎಂಸಿ ಕಂಪನಿಗೆ ಗುತ್ತಿಗೆ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂಬ ಆರೋಪ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular