Thursday, January 29, 2026
Google search engine
Homeಆರ್ಥಿಕ‘ಪ್ರೊ ಎಂ.ಡಿ. ನಂಜುಂಡಸ್ವಾಮಿ ಚಿಂತನೆಗಳು ಎಲ್ಲರಿಗೂ ಮಾದರಿ-ಡಾ.ರವಿಕುಮಾರ್ ಭಾಗಿ

‘ಪ್ರೊ ಎಂ.ಡಿ. ನಂಜುಂಡಸ್ವಾಮಿ ಚಿಂತನೆಗಳು ಎಲ್ಲರಿಗೂ ಮಾದರಿ-ಡಾ.ರವಿಕುಮಾರ್ ಭಾಗಿ

ಕರ್ನಾಟಕದ ಲಕ್ಷಾಂತರ ರೈತರನ್ನು ಸಂಘಟಿಸಿ ಅವರಲ್ಲಿ ಹೋರಾಟದ ಪ್ರಜ್ಞೆಯನ್ನು ಮೂಡಿಸಿ ಹಾಗೂ ದುರ್ಬಲ ರೈತ ವರ್ಗದವರಿಗೆ ಮತ್ತು ಶೋಷಣೆಗೆ ಒಳಗಾದವರಿಗೆ ಧ್ವನಿಯಾಗಿ ನಿಂತವರು ಪ್ರೊ.ಎಂ.ಡಿ. ನಂಜುಂಡಸ್ವಾಮಿ ಎಂದು ಕನ್ನಡ ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ. ರವಿಕುಮಾರ್ ಬಾಗಿ ಹೇಳಿದರು.

ತುಮಕೂರು ವಿಶ್ವವಿದ್ಯಾನಿಲಯದ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಅಧ್ಯಯನ ಪೀಠ ಮತ್ತು ಸ್ನಾತಕೋತ್ತರ ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಸಂಯುಕ್ತಾಶ್ರಯದಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎಂ. ಡಿ. ನಂಜುಂಡಸ್ವಾಮಿ ಅವರು ಸಮಾಜವಾದಿ ಚಳವಳಿಯ ಒಬ್ಬ ಶ್ರೇಷ್ಠ ನಾಯಕರಲ್ಲಿ ಒಬ್ಬರು. ಅವರು ತಮ್ಮ ಜೀವನದುದ್ದಕ್ಕೂ ರೈತರು ಮತ್ತು ದುರ್ಬಲ ವರ್ಗದವರ ಪರವಾಗಿ ಹೋರಾಡಿದರು. ಅವರ ಚಿಂತನೆಗಳು ಮತ್ತು ಹೋರಾಟಗಳು ಇಂದಿಗೂ ಜೀವಂತವಾಗಿವೆ ಎಂದರು.

ರೈತರಿಗೆ ವೈಜ್ಞಾನಿಕವಾಗಿ ಬೆಲೆಯನ್ನು ನೀಡಬೇಕು. ತಾವು ಬೆಳೆದ ಬೆಳೆಗೆ ತಾವೇ ಬೆಲೆಯನ್ನು ಕಟ್ಟಬೇಕು. ಘನತೆಯಿಂದ ಬದುಕುವ ಹಾಗೂ ಸ್ವಾಭಿಮಾನದ ಹಾದಿಯನ್ನು ಕಟ್ಟಿಕೊಡಬೇಕು. ಸರ್ಕಾರದ ಅಧಿಕಾರಿಗಳು ಜನ ಸೇವಕರೆ ಹೊರತು ಜನರನ್ನು ಆಳುವ ರಾಜರಲ್ಲ. ಇದರೊಂದಿಗೆ ರೈತರು ಸಾಲಗಾರರಲ್ಲ ಸರ್ಕಾರವೇ ಬಾಕಿದಾರ ಎಂಬ ಮಾತಿನ ಹೋರಾಟದಿಂದ ರೈತರಲ್ಲಿ ಹೋರಾಟದ ಕಿಚ್ಚನ್ನು ಹಚ್ಚುತ್ತಿದ್ದವರು ಎಂ.ಡಿ. ನಂಜುಂಡ ಸ್ವಾಮಿ ಎಂದು ಹೇಳಿದರು.

ಅನ್ಯಾಯದ ವಿರುದ್ಧ ಪ್ರತಿಭಟಿಸುವ ಗುಣವನ್ನು ಬೆಳೆಸಿಕೊಳ್ಳಬೇಕು. ಸಮಾಜಪರ ಜನಪರ ಇನ್ನಿತರ ನಾಯಕ ಗುಣಗಳನ್ನು ಇಂದಿನ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಅಂದಿನ ಕಾಲಕ್ಕೆ ಜಾತಿಯನ್ನು ನಾಶ ಮಾಡದೆ ದೇಶದಲ್ಲಿ ಏನು ಕಟ್ಟಲು ಆಗುವುದಿಲ್ಲ, ಬಾಗು ಬೆನ್ನೆಲುಬಾಗಿದ್ದ ರೈತನ ಹೆಗಲನ್ನ ಮೇಲೆ ಎತ್ತಿದ ಕೀರ್ತಿ ಎಂ.ಡಿ ನಂಜುಂಡಸ್ವಾಮಿಯವರಿಗೆ ಸಲ್ಲುತ್ತದೆ. ಸಮಾಜವಾದಿ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ರೈತರ ಸಮಸ್ಯೆಗಳನ್ನು ಪರಿಹರಿಸಲು ಶ್ರಮಿಸಿದವರು ಎಂ ಡಿ ನಂಜುಂಡಸ್ವಾಮಿ ಎಂದು ಹೇಳಿದರು.
ಇತಿಹಾಸ ಮತ್ತು ಪುರಾತತ್ವ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಎಂ ಕೊಟ್ರೇಶ್, ಪ್ರೊ. ಎಂ ಡಿ ನಂಜುಂಡಸ್ವಾಮಿ ಅಧ್ಯಯನ ಪೀಠದ ನಿರ್ದೇಶಕ ಡಾ. ಮುನಿರಾಜು ಎಂ., ಸ್ನಾತಕೋತ್ತರ ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷ ಪ್ರೊ. ರವೀಂದ್ರ ಕುಮಾರ್ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular