Sunday, March 15, 2026
Google search engine
Homeಮುಖಪುಟಒಳಮೀಸಲಾತಿ ಜಾರಿ ಮಾಡಿಯೇ ತೀರುತ್ತೇವೆ-ಸಚಿವ ಡಾ.ಜಿ.ಪರಮೇಶ್ವರ್ ಖಚಿತ ಭರವಸೆ

ಒಳಮೀಸಲಾತಿ ಜಾರಿ ಮಾಡಿಯೇ ತೀರುತ್ತೇವೆ-ಸಚಿವ ಡಾ.ಜಿ.ಪರಮೇಶ್ವರ್ ಖಚಿತ ಭರವಸೆ

ಒಳ ಮೀಸಲಾತಿ ಹೋರಾಟ ಹಲವು ವರ್ಷಗಳಿಂದ ನಡೆಯುತ್ತಿದೆ, ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಹಿಂದಿನ ಸರ್ಕಾರ ಯಾವ ರೀತಿ ದಾರಿ ತಪ್ಪಿಸಿದರು ಎಂಬುದು ನಮಗೆ ಗೊತ್ತಿದೆ, ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಒಳಮೀಸಲಾತಿ ಜಾರಿ ಮಾಡಿಯೇ ತೀರುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಖಚಿತ ಭರವಸೆ ನೀಡಿದರು.

ತುಮಕೂರಿನಲ್ಲಿ ಹಮ್ಮಿಕೊಂಡಿದ್ದ ಹಸಿರುಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 39ನೇ ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯದಲ್ಲಿ 2.50 ಲಕ್ಷ ಹುದ್ದೆಗಳು ನೇಮಕವಾಗಬೇಕಿದೆ, ಪೊಲೀಸ್ ಇಲಾಖೆಯಲ್ಲಿ 18 ಸಾವಿರ ಹುದ್ದೆಗಳು ಖಾಲಿ ಇವೆ, ಕಾರಾಗೃಹದಲ್ಲಿ ಶೇ. 38ರಷ್ಟು ಹುದ್ದೆಗಳು ಖಾಲಿ ಇವೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆಯಲ್ಲಿ ನೇಮಕಾತಿ ನಡೆಯಬೇಕಿದೆ, ಒಳ ಮೀಸಲಾತಿ ತೀರ್ಮಾನ ಆಗುವವರೆಗು ನೇಮಕಾತಿ ಹಾಗೂ ಮುಂಬಡ್ತಿ ನೀಡುವುದಿಲ್ಲ ಎಂಬ ಕಠಿಣ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ ಎಂದು ತಿಳಿಸಿದರು.

ಪೋಷಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಬೇಕು, ಒಂದೊತ್ತಿನ ಊಟ ಕಡಿಮೆಯಾದರು ಪರವಾಗಿಲ್ಲ. ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ, ಇದರಿಂದ ಮುಂದಿನ ಪೀಳಿಗೆಯ ಜೀವನ ಬದಲಾಗುತ್ತದೆ. ಸ್ಪರ್ಧಾತ್ಮಕ ಜಗತ್ತಿಗೆ ನಮ್ಮ ಮಕ್ಕಳನ್ನು ತಯಾರು ಮಾಡಬೇಕು ಎಂದು ಹೇಳಿದರು. ದೇಶದಲ್ಲಿರುವ ಜಾತಿ ಸಂಘಗಳು ಹೊರ ದೇಶಗಳಲ್ಲಿ ಹುಟ್ಟಿಕೊಂಡಿವೆ. ಅಲ್ಲಿಯೂ ಜಾತಿ ಸಮ್ಮೇಳನ ನಡೆಯುತ್ತಿವೆ ಎಂದು ಬೇಸರಿಸಿದರು.

ತುಮಕೂರು ನಗರದಲ್ಲಿ ಬಾಬು ಜಗಜೀವನ್ ರಾಂ ಅವರ ಪ್ರತಿಮೆ ಪ್ರತಿಷ್ಠಾಪನೆಗಾಗಿ ಅಗತ್ಯವಿರುವ ಪ್ರತಿಮೆಯನ್ನು ನಾನೇ ಕೊಡುಗೆಯಾಗಿ ನೀಡುತ್ತೇನೆ. ಸಮುದಾಯ ಭವನ ಮತ್ತು ಪ್ರತಿಮೆಯನ್ನು ಸ್ಥಾಪಿಸುವ ಕೆಲಸವನ್ನು ಬಹಳ ವೇಗವಾಗಿ ಮಾಡಬೇಕಿದೆ. ಇದಕ್ಕಾಗಿ ಐದು ಎಕರೆ ಜಾಗವನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ಡಿಸಿ ಶುಭ ಕಲ್ಯಾಣ್, ಎಸ್‌ಪಿ ಕೆ.ವಿ.ಅಶೋಕ್, ಜಿ,ಪಂ. ಸಿಇಒ ಪ್ರಭು.ಜಿ, ಎಡಿಸಿ ಡಾ.ಎನ್ ತಿಪ್ಪೇಸ್ವಾಮಿ, ಎಸಿ ನಹೀದಾ ಜûಮ್ ಜûಮ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಹಾಗೂ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular