Thursday, January 29, 2026
Google search engine
Homeಮುಖಪುಟನಾನು ಅಧಿಕಾರಕ್ಕಾಗಿ ಅಂಟಿ ಕೂತವನಲ್ಲ-ಮಾಜಿ ಸಚಿವ ಕೆ.ಎನ್.ರಾಜಣ್ಣ

ನಾನು ಅಧಿಕಾರಕ್ಕಾಗಿ ಅಂಟಿ ಕೂತವನಲ್ಲ-ಮಾಜಿ ಸಚಿವ ಕೆ.ಎನ್.ರಾಜಣ್ಣ

ಸಮಯ ಬಂದಾಗ ಸಚಿವ ಸ್ಥಾನವನ್ನು ತೆಗೆದುಕೊಳ್ಳುತ್ತೇನೆ. ಆದರೆ ಈಗ ನಾನು ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡುವುದಿಲ್ಲ ಎಂದು ಮಾಜಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯ ಮಧುಗಿರಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರ ಎಂದಿಗೂ ಶಾಶ್ವತವಲ್ಲ. ನಾನು   ಅಧಿಕಾರಕ್ಕಾಗಿ ಎಂದು ಅಂಟಿಕೊಂಡು ಕೂತಿಲ್ಲ ಎಂದು ಹೇಳಿದರು.

ಸಚಿವ ಸ್ಥಾನ ಹೋಗಲು ಹಲವು ಕಾರಣಗಳಿವೆ. ಸಮಯ ಬಂದಾಗ ಎಲ್ಲವನ್ನೂ ಹೇಳುವೆ. ನಾನು ಯಾವೊತ್ತೂ ಸ್ವಾರ್ಥಕ್ಕಾಗಿ ಸುಳ್ಳು ಹೇಳಿಲ್ಲ. ಆದರೆ ಬೇರೆಯವರ ಅನುಕೂಲಕ್ಕಾಗಿ ಸುಳ್ಳು ಹೇಳಿದ್ದೇನೆ ಎಂದು ಹೇಳಿದ್ದಾರೆ.

ನಮಗೆ ಅಧಿಕಾರ ಇಲ್ಲದಿದ್ದರೂ ಪರವಾಗಿಲ್ಲ. ಜನರ ಪ್ರೀತಿ ಉಳಿಸಿಕೊಂಡು ಹೋಗುವ ಶಕ್ತಿಯನ್ನು ಆ ದೇವರು ಕೊಡಲಿ ಎಂದು ತಿಳಿಸಿದರು.

ಹಳ್ಳಿಗಳಲ್ಲಿ ಮತಗಳವು ಮಾಡುವುದು ಕಷ್ಟ. ಹಳ್ಳಿಯ ಜನರು ನಕಲಿ ಓಟು ಹಾಕಿಸಲು ಬಿಡುವುದಿಲ್ಲ. ಆದರೂ ಎಚ್ಚರಿಕೆಯಿಂದ ಇರುವಂತೆ ಕಾರ್ಯಕರ್ತರಿಗೆ ತಿಳಿಹೇಳಬೇಕು. ನಗರ ಪ್ರದೇಶದಲ್ಲಿ ಮತಗಳ್ಳತನ ಮಾಡಬಹುದು ಎಂದು ಸ್ಪಷ್ಟಪಡಿಸಿದರು.

ಇದಕ್ಕೂ ಮುನ್ನ 79ನೇ ಸ್ವಾತಂತ್ರ್ಯ ದಿನೋತ್ಸವದಲ್ಲಿ ಮಾತನಾಡಿದ ಅವರು, ಬಡವರ ಪರ ಉತ್ತಮ ಆಡಳಿತ ನೀಡಿದಂತಹ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಸರ್ಕಾರವನ್ನು ವಜಾ ಮಾಡಲಾಯಿತು. ಇದಲ್ಲದೆ ಮಾಜಿ ಮುಖ್ಯಮಂತ್ರಿ ಎಂ.ವಿ.ವೀರಪ್ಪ ಮೋಯ್ಲಿ ಅವರು ಬಡವರ ಮಕ್ಕಳಿಗೆ ಅನುಕೂಲವಾಗಲೆಂದು ಸಿಇಟಿ ಜಾರಿಗೆ ತಂದರು. ಅಂತಹವರನ್ನು ಅಧಿಕಾರದಿಂದ ಇಳಿಸಲಾಯಿತು. ಅಂದ ಹಿರಿಯರಿಗೆ ಅಧಿಕಾರ ಕಳೆದುಕೊಂಡ ಮೇಲೆ ನನ್ನ ಸಚಿವ ಸ್ಥಾನ ಹೋಗಿರುವುದು ನನಗೇನು ಬೇಸರ ಇಲ್ಲ ಎಂದು ತಿಳಿಸಿದರು.

ನನ್ನ ಸಚಿವ ಸ್ಥಾನದ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಆಕ್ಷೇಪ ಎತ್ತುವುದು ಸರಿಯಲ್ಲ ಎಂದರು.

ಎಲ್ಲರೂ ಕಾಂಗ್ರೆಸ್ ಹೈಕಮಾಂಡ್ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಬೇಕು. ಮಧುಗಿರಿ ಕ್ಷೇತ್ರದ ಜನತೆ ನನ್ನ ಮೇಲೆ ವಿಶ್ವಾಸವಿಟ್ಟು 35 ಸಾವಿರ ಅಂತರದ ಮತಗಳಿಂದ ಜಯಶೀಲರನ್ನಾಗಿ ಮಾಡಿದ್ದಾರೆ ಎಂದು ಹೇಳಿದರು.

ಮಧುಗಿರಿ ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕು. ತಾಲ್ಲೂಕಿನ ಎಲ್ಲಾ ಕೆರೆಗಳಿಗೂ ನೀರು ಹರಿಸುವುದು ನನ್ನ ಮುಖ್ಯ ಗುರಿಯಾಗಿದೆ. ಅಷ್ಟೇ ಅಲ್ಲದೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಅಭಿವೃದ್ದಿ ಮಾಡುವುದಾಗಿ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular