Sunday, March 15, 2026
Google search engine
Homeಮುಖಪುಟಇತ್ತೀಚಿನ ದಿನಗಳಲ್ಲಿ ಮನರಂಜನೆ ಮಾಯ-ಕೆಎನ್ಆರ್ ಕಳವಳ

ಇತ್ತೀಚಿನ ದಿನಗಳಲ್ಲಿ ಮನರಂಜನೆ ಮಾಯ-ಕೆಎನ್ಆರ್ ಕಳವಳ

ದಸರಾ ಉತ್ಸವ ಸೇರಿದಂತೆ ಇತರೆ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಶಾಸಕ ಹಾಗೂ ಮಾಜಿ ಸಚಿವ ಕೆ.ಎನ್. ರಾಜಣ್ಣ ತಿಳಿಸಿದರು.

ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ದಸರಾ ಉತ್ಸವದ ಅಂಗವಾಗಿ ನಿರ್ಮಿಸಲಾಗಿರುವ ಹಾಸ್ಯನಟ ನರಸಿಂಹರಾಜು ವೇದಿಕೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಲಾವಿದರನ್ನು ಅಭಿನಂದಿಸಿ ಅವರು ಮಾತನಾಡಿದರು.

ನಾವು ಕಿರಿ ವಯಸ್ಸಿನಲ್ಲಿದ್ದಾಗ ಹಾಸ್ಯ ನಟರಾದ ನರಸಿಂಹರಾಜು ತೆರೆ ಮೇಲೆ ಬಂದರೆ ಮನರಂಜನೆಯ ಹೊಳೆಯೇ ಹರಿಯುತ್ತಿತ್ತು. ಅಂದು ನಾವು ಟೂರಿಂಗ್ ಟಾಕೀಸ್‌ಗಳಲ್ಲಿ ಸಿನಿಮಾ ನೋಡಲು ಹೋಗುತ್ತಿದ್ದೆವು. ನರಸಿಂಹರಾಜು ಅವರಂತಹ ಮೇರು ಕಲಾವಿದರು ನಮ್ಮ ಜಿಲ್ಲೆಯವರು ಎನ್ನುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಸಿನಿಮಾಗಳಲ್ಲೂ ಮನರಂಜನೆ ಮಾಯವಾಗುತ್ತಿದೆ. ದಸರಾ ಉತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮನರಂಜನೆ ನೀಡುವ ಕಾರ್ಯ ನಡೆಯುತ್ತಿರುವುದು ಉತ್ತಮವಾಗಿದೆ. ಹಿಂದಿನಿಂದ ಬಂದಿರುವ ಪೌರಾಣಿಕ ನಾಟಕಗಳು ಮನರಂಜನೆ ನೀಡುವಲ್ಲಿ ಯಶಸ್ವಿಯಾಗುತ್ತಲೇ ಇವೆ ಎಂದು ತಿಳಿಸಿದರು.

ದಸರಾ ಅಂಗವಾಗಿ ಕಲಾಕೃತಿಗಳ ಪ್ರದರ್ಶನ, ವಸ್ತು ಪ್ರದರ್ಶನ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲೆ ಹಾಗೂ ಹೊರ ಜಿಲ್ಲೆಗಳ ಜನರ ವೀಕ್ಷಣೆಗೆ ಅನುವು ಮಾಡಿಕೊಡಲಾಗಿದೆ. ಜನರಿಗೆ ಈ ವಸ್ತುಪ್ರದರ್ಶನಗಳಿಂದ ಅಗತ್ಯ ಮಾಹಿತಿ ಒದಗಿಸುವ ಪ್ರಯತ್ನ ನಡೆದಿರುವುದು ಉತ್ತಮ ಕಾರ್ಯವಾಗಿದೆ ಎಂದು ಹೇಳಿದರು. ದಸರಾ ಆಚರಣೆ ಸಂಪ್ರದಾಯವನ್ನು ಜಿಲ್ಲಾಡಳಿತ ಮುಂದುವರೆಸಿಕೊಂಡು ಹೋಗಲಿ ಎಂದು ಆಶಿಸಿದರು.

ತುಮಕೂರು ದಸರಾ ಉತ್ಸವವನ್ನು 2ನೇ ಬಾರಿಗೆ ಜಿಲ್ಲಾಡಳಿತದ ವತಿಯಿಂದ ಆಚರಿಸಲಾಗುತ್ತಿದೆ. ಈ ಬಾರಿ ಕಳೆದ ವರ್ಷಕ್ಕಿಂತ ಅದ್ದೂರಿಯಾಗಿ, ವೈಭವೋಪೇತವಾಗಿ ದಸರಾ ಆಚರಿಸಲಾಗುತ್ತಿದೆ. ದಸರಾ ಉತ್ಸವವನ್ನು ಬಹಳ ಅಚ್ಚುಕಟ್ಟಾಗಿ ಆಚರಿಸುತ್ತಿರುವ ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿ.ಪಂ. ಸಿಇಒ ಜಿ. ಪ್ರಭು, ಎಸ್‌ಪಿ ಕೆ.ವಿ. ಅಶೋಕ್ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular