ರಾಮಾಯಣ ರಚಿಸಿದ ವಾಲ್ಮೀಕಿ ಮಹರ್ಷಿಗಳ ಬಗ್ಗೆ ಯುವಜನರಿಗೆ ತಿಳಿಸಲು, ಹೆಚ್ಚಿನ ಅಧ್ಯಯನ ಕೈಗೊಳ್ಳಲು ವಾಲ್ಮೀಕಿ ಅಧ್ಯಯನ ಪೀಠವನ್ನು ತುಮಕೂರು ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಲು ಸರಕಾರದೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ತುಮಕೂರಿನಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಒಂದು ಅಧ್ಯಯನ ಪೀಠ ವಿಶ್ವವಿದ್ಯಾಲಯದಲ್ಲೇ ಸ್ಥಾಪನೆ ಆಗಬೇಕು. ರಾಮಾಯಣವನ್ನು ವಿಶ್ವವಿದ್ಯಾಲಯ, ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರ ಅದರ ಬಗ್ಗೆ ಸಂಶೋಧನೆಗಳಾಗಬೇಕು. ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪನೆಗೆ ನಾನು ಬದ್ಧ ಎಂದು ಹೇಳಿದರು.
ಕನ್ನಡ ಪ್ರಾಧ್ಯಾಪಕಿ ಡಾ. ಅನಸೂಯ ಎಸ್ ಕೆಂಪನಹಳ್ಳಿ, ಶಾಸಕ ಸುರೇಶ್ಗೌಡ, ಜಿಲ್ಲಾ ನಾಯಕ ಮಹಿಳಾ ಸಮಾಜದ ಅಧ್ಯಕ್ಷೆ ಎಸ್.ಆರ್ ಶಾಂತಲಾ ರಾಜಣ್ಣ ಮಾತನಾಡಿದರು. ಶಾಸಕ ಜಿಬಿ ಜ್ಯೋತಿಗಣೇಶ್, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ, ಡಿಸಿ ಶುಭಕಲ್ಯಾಣ, ಎಸ್ಪಿ ಅಶೋಕ ಕೆ.ವಿ, ಎಡಿಸಿ ಎನ್ ತಿಪ್ಪೇಸ್ವಾಮಿ, ತಹಶೀಲ್ದಾರ್ ರಾಜೇಶ್ವರಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸಿದ್ದರಾಜು, ಸಮಾಜ ಕಲ್ಯಾಣ ಅಧಿಕಾರಿ ವಿ.ಎಸ್.ಶಿವಣ್ಣ, ಜಿಲ್ಲಾ ಗ್ಯಾರೆಂಟಿ ಯೋಜನಾ ಅಧ್ಯಕ್ಷ ಜಿ.ಚಂದ್ರಶೇಖರಗೌಡ, ಪಾಲಿಕೆ ಮಾಜಿ ಮಹಾಪೌರ ಜಿಬಿ ಕೃಷ್ಣಪ್ಪ, ಕೆಂಪರಾಮಯ್ಯ, ಸಿ.ದಾಸಪ್ಪ, ಎಚ್.ಜಿ.ಪುರುಷೋತ್ತಮ, ವಿಜಯಕುಮಾರ್, ಕೆಂಪಹನುಮಯ್ಯ, ಕೃಷ್ಣಮೂರ್ತಿ, ಶ್ರೀಧರ್ ಕುಪ್ಪೂರ, ನಾಗರಾಜು, ಬಸವರಾಜು, ನಾಗರಾಜುಆರ್, ರಾಮಚಂದ್ರ ನಾಯಕ್ ಇದ್ದರು.


