ದಾರಿ ಬುತ್ತಿ ಬಳಗದ ವತಿಯಿಂದ ಅ.26ರಂದು ಬೆಳಗ್ಗೆ 10.30 ಗಂಟೆಗೆ ತುಮಕೂರು ನಗರದ ಕನ್ನಡ ಭವನದಲ್ಲಿ ಲೇಖಕಿ ಬಾ.ಹ.ರಮಾಕುಮಾರಿ ಅವರ ‘ಏಕದಾರಿ ಮತ್ತು ಇತರ ಕವಿತೆಗಳು’ ಕವನ ಸಂಕಲನ ಬಿಡುಗಡೆಯಾಗಲಿದೆ.
ವಿಶೇಷವೆಂದರೆ ದಾರಿಬುತ್ತಿ ಬಳಗದ ಮಕ್ಕಳಿಂದ ಪುಸ್ತಕ ಬಿಡುಗಡೆ ಮಾಡಲಾಗುವುದು. ಪುಸ್ತಕ ಕುರಿತು ಕವಿ ಹಾಗೂ ಪ್ರಾಧ್ಯಾಪಕಿ ಡಾ.ಗೀತ ವಸಂತ್ ಮಾತನಾಡುವರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾಧ್ಯಕ್ಷೆ ಮಲ್ಲಿಕಾ ಬಸವರಾಜು, ಕೃತಿಕಾರ್ತಿ ಹಾಗೂ ಲೇಖಕಿ ಬಾ.ಹ.ರಮಾಕುಮಾರಿ, ಹಾಸನದ ಕವಿ ಡಾ.ಎಚ್.ಸಿ.ಭವ್ಯ ನವೀನ್ ಭಾಗವಹಿಸುವರು.


