ಕರ್ನಾಟಕ ರಾಜ್ಯ ವಕೀಲರ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಹಿರಿಯ ವಕೀಲ ಕೆ. ಕೋಟೇಶ್ವರ ರಾವ್ ತುಮಕೂರು ನ್ಯಾಯಾಲಯದ ಆವರಣದಲ್ಲಿ ತಮ್ಮ ಪರ ಪ್ರಚಾರ ನಡೆಸಿದರು.
ನಾನು ರಾಜ್ಯ ವಕೀಲರ ಪರಿಷತ್ ಚುನಾವಣೆಗೆ ಸ್ಪರ್ಧಿಸಿದ್ದು, ನನಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು. ಈ ಮೂಲಕ ವಕೀಲರ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ವಕೀಲರಲ್ಲಿ ಮನವಿ ಮಾಡಿದರು.
ವಕೀಲರ ಅಭಿವೃದ್ಧಿಗಾಗಿ ನಿರಂತರ ಕಾರ್ಯನಿರ್ವಹಿಸುತ್ತೇನೆ. ರಾಜ್ಯದ ಎಲ್ಲ ವಕೀಲರ ಬೆಂಬಲದೊಂದಿಗೆ 2 ಬಾರಿ ಆಯ್ಕೆಯಾಗಿ ಕೆಲಸ ಮಾಡಿದ್ದೇನೆ. ಈ ಬಾರಿಯು ನನಗೆ ಮತ ನೀಡುವಂತೆ ಮನವಿ ಮಾಡಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ಹೇಳಿದರು.
ಈಗಾಗಲೇ ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಿಗೂ ಭೇಟಿ ನೀಡಿದ್ದೇನೆ. ಎಲ್ಲಾ ಜಿಲ್ಲೆಗಳಲ್ಲೂ ವಕೀಲರಿಗೆ ತಮಗೆ ಮತ ಚಲಾಯಿಸುವಂತೆ ಮನವಿ ಮಾಡಿದ್ದೇನೆ ಎಂದರು.
ಇದೀಗ ತುಮಕೂರು ಜಿಲ್ಲೆಯಲ್ಲಿ ಪ್ರಚಾರ ಕೈಗೊಂಡಿದ್ದೇನೆ. ತುಮಕೂರು ನಗರ, ಗುಬ್ಬಿ ಸೇರಿದಂತೆ ಕೆಲ ತಾಲೂಕುಗಳಿಗೆ ಭೇಟಿ ನೀಡಿ ವಕೀಲರಲ್ಲಿ ಮನವಿ ಮಾಡಿಕೊಂಡಿದ್ದೇನೆ. ಪ್ರಥಮ ಪ್ರಾಶಸ್ತ್ಯ ಮತ ನೀಡುವಂತೆ ವಕೀಲರಲ್ಲಿ ಮನವಿ ಮಾಡಿದ್ದೇನೆ ಎಂದರು.
ತುಮಕೂರಿನಲ್ಲಿ ವಕೀಲರಾದ ಪೂರ್ಣಿಮಾ, ನಿರಂಜನ್, ಪುಟ್ಟೇಗೌಡ, ಈ.ಶಿವಣ್ಣ, ರೇಣುಕಯ್ಯ, ಓಬಯ್ಯ, ಡಿ.ಶಿವಣ್ಣ, ಸುರೇಶ್ ಇದ್ದರು.


