Tuesday, March 10, 2026
Google search engine
Homeಮುಖಪುಟಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದರೆ ಗುರಿ ಮುಟ್ಟಲು ಸಾಧ್ಯ

ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದರೆ ಗುರಿ ಮುಟ್ಟಲು ಸಾಧ್ಯ

ಸ್ಪರ್ಧಾತ್ಮಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿದರೆ ಮಾತ್ರ ಬದುಕಿನಲ್ಲಿ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದು ತುಮಕೂರು ತಾಲೂಕು ಪಂಚಾಯ್ತಿ ಇಒ ಲಕ್ಷ್ಮೀನಾರಾಯಣ್ ಹೇಳಿದರು.

ತುಮಕೂರು ನಗರದ ಡಾ. ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ನಿಲಯಾರ್ಥಿಗಳಿಗೆ ಏರ್ಪಡಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ದೃಢವಾದ ಸಂಕಲ್ಪ ಮಾಡಿದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧ್ಯವಾಗುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟೇ ಅಂಕ ಗಳಿಸಿದರೂ ಸಾಲದಾಗುತ್ತಿದೆ. ದಿನೇ ದಿನೇ ಸ್ಪರ್ಧಾತ್ಮಕ ಜಗತ್ತು ಉದ್ಭವವಾಗುತ್ತಿರುವುದರಿಂದ ಎಷ್ಟು ಪರಿಶ್ರಮ ಪಟ್ಟರೂ ಸಾಲದಾಗುತ್ತಿದೆ ಎಂದರು.

ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯಲು ಮುಂದಾಗಬೇಕು. ದೃಢವಾದ ನಿರ್ಧಾರದಿಂದ ಯಶಸ್ಸು ಗಳಿಸಲು ಸಾಧ್ಯ. ಸತತ 8 ರಿಂದ 10 ಗಂಟೆಗಳ ಕಾಲ ಓದಲು ಸಮಯವನ್ನು ಮೀಸಲಿಟ್ಟರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದ ಅವರು, ಆಟದ ಜತೆಗೆ ಪಾಠವೂ ಬಹು ಮುಖ್ಯ. ಇದನ್ನು ಯಾರೂ ಕೂಡ ನಿರ್ಲಕ್ಷಿಸಬಾರದು ಎಂದರು.

ಇತ್ತೀಚಿನ ದಿನಗಳಲ್ಲಿ ಎಲ್ಲರೂ ಮೊಬೈಲ್ ಗೀಳಿಗೆ ಮಾರು ಹೋಗಿ ಅಗತ್ಯವಾಗಿ ಬೇಕಾಗಿರುವುದನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳು ಬದುಕು ಕಟ್ಟಿಕೊಳ್ಳಲು ಇದು ಸುಸಂದರ್ಭ. ಹತ್ತಾರು ಹುಳಿ ಏಟು ಬಿದ್ದಾಗ ಒಂದು ಕಲ್ಲು ಅದ್ಭುತ ಶಿಲೆಯಾಗುತ್ತದೆ. ಆದ್ದರಿಂದ ಕಠಿಣ ಪರಿಶ್ರಮ, ಅಭ್ಯಾಸದಿಂದ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.

ತಂದೆ-ತಾಯಿ ನಿಮ್ಮ ಮೇಲೆ ಭರವಸೆ ಇಟ್ಟು ವ್ಯಾಸಂಗ ಮಾಡಲು ಹಳ್ಳಿಗಳಿಂದ ನಗರ ಪ್ರದೇಶಗಳಿಗೆ ಕಳುಹಿಸಿರುತ್ತಾರೆ. ನಾವು ಮಾಡಲು ಆಗದ ಸಾಧನೆಯನ್ನು ನಮ್ಮ ಮಕ್ಕಳು ಮಾಡಬೇಕು ಎಂಬ ಆಸೆಯನ್ನು ಹೆತ್ತವರು ಹೊಂದಿರುತ್ತಾರೆ. ನಮ್ಮ ಕಷ್ಟ ನಮಗೆ ಮಾತ್ರ ಸೀಮಿತವಾಗಿರಲಿ. ನಮ್ಮ ಮಕ್ಕಳಿಗೆ ಬೇಡ ಎಂದು ಎಲ್ಲ ರೀತಿಯಲ್ಲೂ ತ್ಯಾಗ ಮಾಡಿ ನಿಮ್ಮನ್ನು ಓದಿಸುತ್ತಾರೆ. ಇದನ್ನು ವಿದ್ಯಾರ್ಥಿಗಳು ಅರ್ಥೆÊಸಿಕೊಂಡು ನಿಮ್ಮ ತಂದೆ-ತಾಯಿಗಳ ಆಸೆ ಈಡೇರಿಸಲು ಪರಿಶ್ರಮದಿಂದ ಅಧ್ಯಯನ ಮಾಡಬೇಕು ಎಂದು ಸಲಹೆ ಮಾಡಿದರು.

ಅಚಲವಾದ ಪ್ರಯತ್ನ ಹಾಗೂ ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿದರೆ ಸಾಧನೆ ಮಾಡಬಹುದು. ಆಗ ಸಮಾಜ ನಿಮ್ಮನ್ನು ಗುರುತಿಸಿ ಗೌರವಿಸುತ್ತದೆ ಎಂದರು.

ವಿದ್ಯಾರ್ಥಿಗಳ ಜೀವನ ಚಿನ್ನದ ಜೀವನ. ಇದೊಂದು ಸುವರ್ಣಾಕ್ಷರಗಳಲ್ಲಿ ಬರೆದಿಟ್ಟುಕೊಳ್ಳಲು. ವಿದ್ಯಾರ್ಥಿ ಜೀವನವನ್ನು ಇತಿಮಿತಿಯಲ್ಲಿ ಅನುಭವಿಸಬೇಕು. ಅಡ್ಡಾದಿಡ್ಡಿಯಾಗಿ ಬಳಸಿದರೆ ಮುಂದೆ ಪಶ್ಚಾತ್ತಾಪಪಡಬೇಕಾಗುತ್ತದೆ. ಒಂದು ವೇಳೆ ಪಶ್ಚಾತ್ತಾಪಪಟ್ಟರೂ ಈ ಸಮಯ ಮತ್ತೆ ಬರುವುದಿಲ್ಲ. ಈ ಸಂದರ್ಭವನ್ನು ಕೈಚೆಲ್ಲಿದರೆ ಹೆತ್ತವರಿಗೆ ಹೊರೆಯಾಗಿರುತ್ತೀರಾ, ಆಸ್ತಿಯಾಗಿರುವುದಿಲ್ಲ ಎಂದು ಎಚ್ಚರಿಸಿದರು.
ಸ್ಪರ್ಧಾತ್ಮಕ ಪರೀಕ್ಷೆಗೆ ಪೂರ್ವಭಾವಿ ತಯಾರಿ ಮಾಡಿಕೊಳ್ಳಬೇಕು. ಜತೆಗೆ ಮಾರ್ಗದರ್ಶನವನ್ನು ಪಡೆಯಬೇಕು ಎಂದು ಸಲಹೆ ನೀಡಿದರು.

ಕಾರ್ಯಾಗಾರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರಂಗಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಸಂಯೋಜಕ ಶಶಿಧರ್, ಸಂಪನ್ಮೂಲ ವ್ಯಕ್ತಿಗಳಾದ ನಾಗರಾಜು, ಉದಯ್ ಸಾಗರ್, ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ನಿದ್ಯಾರ್ಥಿಗಳು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular