Wednesday, March 25, 2026
Google search engine
Homeಮುಖಪುಟಒಳಮೀಸಲಾತಿ ಇಲ್ಲದೆ ಉದ್ಯೋಗಗಳ ಭರ್ತಿ:ಅಧಿಸೂಚನೆ ಹಿಂಪಡೆಯಲು ಆಗ್ರಹ

ಒಳಮೀಸಲಾತಿ ಇಲ್ಲದೆ ಉದ್ಯೋಗಗಳ ಭರ್ತಿ:ಅಧಿಸೂಚನೆ ಹಿಂಪಡೆಯಲು ಆಗ್ರಹ

ಒಳಮೀಸಲಾತಿ ಇಲ್ಲದೆ ರಾಜ್ಯದಲ್ಲಿ 56432 ಹುದ್ದೆಗಳ ತುಂಬಲು ಹೊರಡಿಸಿರುವ ಅಧಿಸೂಚನೆಯನ್ನು ಕೂಡಲೇ ಹಿಂಪಡೆಯಬೇಕು, ವಿಶ್ವವಿದ್ಯಾಲಯಗಳನ್ನು ಒಂದು ಘಟಕವಾಗಿ ಪರಿಗಣಿಸಿ ನೇಮಕಾತಿ ಕೈಬಿಡಬೇಕು ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಆರ್.ಪಿ.ಐ ಕರ್ನಾಟಕ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಎನ್.ಮೂರ್ತಿ ಬಣದ ವತಿಯಿಂದ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ, ಸರಕಾರ ಒಳಮೀಸಲಾತಿ ಹೊರತಾಗಿ ಶೇ.15ರ ಮೀಸಲಾತಿ ಅಡಿಯಲ್ಲಿ 56432 ಹುದ್ದೆಗಳನ್ನು ತುಂಬಲು ಮುಂದಾಗಬಾರದು. ಇದರಿಂದ ಮಾದಿಗ ಸಮುದಾಯಕ್ಕೆ ಬಾರಿ ಅನ್ಯಾಯವಾಗಲಿದೆ. ಸರಕಾರ ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಪಿ.ಎನ್.ರಾಮಯ್ಯ, ಮಾದಿಗ ಮತ್ತು ಮಾದಿಗ ಸಂಬAಧಿತ ಜಾತಿಗಳು ಸಹಸ್ರಾರು ವರ್ಷಗಳಿಂದ ಚಪ್ಪಲಿ ಹೊಲಿಯುವುದು. ಬೀದಿ ಗುಡಿಸುವುದು ಚರಂಡಿ ಸ್ವಚ್ಚ ಮಾಡುವ ಕೀಳು ವೃತ್ತಿಯಲ್ಲಿ ಕನಿಷ್ಠ ಜೀವನ ನಡೆಸುತ್ತಿದ್ದಾರೆ. ಹಾಗಾಗಿ ತೀರ ಬಡತನ, ನಿರುದ್ಯೋಗವಿಲ್ಲದೆ ದಯನೀಯ ಸ್ಥಿತಿಯಲ್ಲಿ ಬರಡು ಜೀವನ ನಡೆಸುತ್ತಿದ್ದಾರೆ. ಅಲ್ಲದೆ 101 ಪರಿಶಿಷ್ಟ ಜಾತಿಗಳ ಅಯಾ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಉದ್ಯೋಗ ನೀಡಿ ಸಮಪಾಲು ಸಮಬಾಳು ನೀತಿ ಅನುಸರಿಸಲಿ. ಹಾಗಾಗಿ ಸಮುದಾಯಗಳು ಸ್ವಾವಲಂಬಿಗಳಾಗಿ ಗೌರವಯುತ ಬದುಕು ಕಟ್ಟಿಕೊಳ್ಳಲು ಸರಕಾರಿ ಉದ್ಯೋಗ ತೀರ ಅಗತ್ಯವಾಗಿದೆ. ರಾಜ್ಯ ಸರಕಾರ ಉದ್ಯೋಗಳಲ್ಲಿ ಮೀಸಲಾತಿ ಕಲ್ಪಿಸಲು ಕಾನೂನು ತೊಡಕು, ತಾಂತ್ರಿಕ ಅಡಚಣೆಯ ಕುಂಟು ನೆಪ ಹೇಳುತ್ತಿರುವುದು ಈ ಸಮಾಜವನ್ನು ವಂಚಿಸುವ ರಾಜಕೀಯ ಹುನ್ನಾರವಾಗಿದೆ. ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್, ಬಿ.ಜೆ.ಪಿ. ಜೆ.ಡಿ.ಎಸ್ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿ ಪ್ರಾಮಾಣಿಕ ಪ್ರಯತ್ನ ಮಾಡದೆ ವಂಚಿಸಿವೆ ಎಂದು ದೂರಿದರು.

ಪ್ರಸ್ತಕವಾಗಿ 56433 ಉದ್ಯೋಗ ನೇಮಕಾತಿ ಹಾಗೂ ಮುಂದಿನ ಎಲ್ಲಾ ಉದ್ಯೋಗ ನೇಮಕಾತಿಗಳಲ್ಲೂ ಒಳ ಮೀಸಲಾತಿ ಅಳವಡಿಸಬೇಕೆಂಬ ಆಗ್ರಹ ನಮ್ಮದು, ಸರಕಾರ ಈ ನಿಟ್ಟಿನಲ್ಲಿ ಯಾವ ಪಕ್ಷಪಾತ ತೋರದೆ ಎಲ್ಲಾ ನೇಮಕಾತಿಗಳಲ್ಲಿಯೂ ಒಳಮೀಸಲಾತಿ ಅಳವಡಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತವನ್ನು ಮಾದಿಗ ಸಂಘಟನೆಗಳು ನೀಡಲಿವೆ ಎಂಬ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಗೂಳೂರು ರಾಜಣ್ಣ, ನಾಗರಾಜ ಗೂಳರಿವೆ, ಸುನಿಲ್, ಹರಿನಾಥ್, ಶಾಂತಕುಮಾರ್, ರಂಗನಾಥ್, ಟಿ.ಕೆ.ನರಸೀಯಪ್ಪ, ಎ.ನಾಗೇಶ್, ಲಕ್ಷö್ಮಮ್ಮ, ಬೆಣ್ಣೇನಹಳ್ಳಿ ರಾಜು, ಸಾಕ್ಷರತಾ ಪ್ರೇರಕರ ಸಂಘದ ರಾಜಣ್ಣ. ಜಿ,ಸತೀಶ್ ಕಂಟಲಗೆರೆ, ರಂಗಸ್ವಾಮಿ, ಉಮೇಶ್.ಕೆ.ಆರ್., ಮಾನಂಗಿ ನಾರಾಯಣಪ್ಪ, ಹುನಮಂತಯ್ಯ, ರಾಮಚಂದ್ರಯ್ಯ, ಹನುಮಂತರಾಜು, ಪುಟ್ಟರಾಜು, ಪುಟ್ಟಸ್ವಾಮಿ ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular