Friday, April 10, 2026
Google search engine
Homeಮುಖಪುಟಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ದೀಪಾ ಚೋಳನ್

ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ದೀಪಾ ಚೋಳನ್

ಪರಿಶಿಷ್ಟ ಜಾತಿ, ಪಂಗಡ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಆಧಾರ್ ಸೀಡಿಂಗ್ ಮಾಡದೆ ಪಾವತಿಸುವಲ್ಲಿ ವಿಳಂಬ ಮಾಡಿರುವ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ್ ಅಧಿಕಾರಿಗಳು ಮೈ ಬಗ್ಗಿಸಿ ಕೆಲಸ ಮಾಡಬೇಕು ಎಂದು ಚಾಟಿ ಬೀಸಿದರು.

ಜಿಲ್ಲಾ ಪಂಚಾಯ್ತಿಯಲ್ಲಿ ಶುಕ್ರವಾರ ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು ಶಾಲಾ ಶಿಕ್ಷಣ ಇಲಾಖೆಯು ಪರಿಶಿಷ್ಟ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಬಾಕಿ ಇರುವ ಬಗ್ಗೆ ಮಾಹಿತಿ ಪಡೆದ ಅವರು, ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಆಧಾರ್ ಸೀಡಿಂಗ್ ಯಾಕೆ ವಿಳಂಬವಾಯಿತು, ನಿಮ್ಮ ನಿರ್ಲಕ್ಷ್ಯಕ್ಕೆ ಏನು ಹೇಳಬೇಕು. ಶಿಕ್ಷಣ ಇಲಾಖೆ ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯ ಮಾಡಿಕೊಂಡು ಕೆಲಸ ಮಾಡಿದರೆ ವಾರದಲ್ಲಿ ಪೂರ್ಣಗೊಳ್ಳುತ್ತದೆ. ಅಧಿಕಾರಿಗಳು ಮೈ ಬಗ್ಗಿಸಿ ಕೆಲಸ ಮಾಡಬೇಕು. ವಿದ್ಯಾರ್ಥಿಗಳ ಶಿಷ್ಯವೇತನ ವಿಷಯದಲ್ಲಿ ಇಂತಹ ಉದಾಸೀನತೆ ಸರಿಯಲ್ಲ, ಈ ತಿಂಗಳಾಂತ್ಯದಲ್ಲಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಶಿಕ್ಷಣ ಇಲಾಖೆಗೆ ಬಿಡುಗಡೆಯಾದ ಅನುದಾನಗಳು ವೆಚ್ಚವಾಗದಿರುವುದನ್ನು ಗಮನಿಸಿದ ಅವರು, ಕ್ರಿಯಾ ಯೋಜನೆ ಮಾಡದೆ, ಆಡಳಿತಾತ್ಮಕ ಅನುಮೋದನೆ ಪಡೆದಿಲ್ಲ. ಹಾಗಾಗಿ ಅನುದಾನ ವೆಚ್ಚವಾಗದೆ ಉಳಿದಿದೆ. ಅಧಿಕಾರಿಗಳಿಗೆ ಈ ಬಗ್ಗೆ ಸರಿಯಾದ ಮಾಹಿತಿಯನ್ನೂ ಇಟ್ಟುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಸಕ್ತ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದು. ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಈ ಬಗ್ಗೆ ಗಮನ ಹರಿಸಬೇಕು ಎಂದರು.

ಜಿಲ್ಲೆಯಲ್ಲಿ ಮುಂಗಾರು ಆರಂಭವಾಗುವ ಮುನ್ನ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಕಾಯ್ದಿರಿಸಿಕೊಳ್ಳಬೇಕು. ರೈತರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.

ತುಮಕೂರು ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬೀದಿನಾಯಿಗಳಿಗೆ ಸಂತಾನ ಹರಣ ಶಸ್ತçಚಿಕಿತ್ಸೆ ನಿರಂತರ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು.

ರೇಷ್ಮೆ ಇಲಾಖೆ, ಲೋಕೋಪಯೋಗಿ ಇಲಾಖೆ, ಜಿಲ್ಲಾ ಪಂಚಾಯ್ತಿ ಇಂಜಿನಿಯರಿAಗ್ ವಿಭಾಗ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಒ ಬಿ.ವಿ.ಅಶ್ವಿಜ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular