ಪುನೀತ್ ರಾಜ್ಕುಮಾರ್ ನೆನಪಿಗಾಗಿ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಐಡಿ ಹಳ್ಳಿ ಹೋಬಳಿಯ ಚಿಕ್ಕದಾಳವಟ್ಟ ಗ್ರಾಮದಲ್ಲಿ ಎರಡು ದಿನಗಳ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ಆಯೋಜನೆ ಮಾಡಲಾಗಿದೆ.
ಏಪ್ರೀಲ್ 25 ಮತ್ತು 26 ರಂದು ಎರಡು ದಿನಗಳ ಕಾಲ ಫ್ರೆಂಡ್ಸ್ ಕ್ರಿಕೆಟ್ ತಂಡದ ಹತ್ತನೇ ವರ್ಷದ ವಾರ್ಷಿಕೋತ್ಸವದ ಸಲುವಾಗಿ ಈ ಟೂರ್ನಿಯನ್ನು ಆಯೋಜಿಸಲಾಗಿದೆ. ಸಾಮರಾಸ್ಯಕ್ಕಾಗಿ ಕ್ರೀಡೆ ಎಂಬ ಧ್ಯೇಯ ವಾಕ್ಯದೊಂದಿಗೆ ಯುವಜನರ ನಡುವೆ ಸೌಹಾರ್ಧ ಮನೋಭಾವವನ್ನು ಬೆಳೆಸಲು ಈ ತಂಡ ಪ್ರತಿವರ್ಷವೂ ಸಹ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸುತ್ತಾ ಬಂದಿದೆ.
ಟೂರ್ನಿಯನ್ನು ವಿಧಾನಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಉದ್ಘಾಟನೆ ಮಾಡಲಿದ್ದಾರೆ. ಪ್ರಥಮ ಬಹುಮಾನ ಆಕರ್ಷಕ ಟ್ರೋಫಿಯ ಜೊತೆ 30000/- ರೂಗಳ ನಗದು ಬಹುಮಾನ ಹಾಗೂ ದ್ವಿತಿಯ ಬಹುಮಾನ ಆಕರ್ಷಕ ಟ್ರೋಫಿ ಜೊತೆಗೆ 15000/- ರೂಗಳ ನಗದು ಬಹುಮಾನ ನೀಡಲಾಗುತ್ತದೆ.
ಭಾಗವಹಿಸಲು ಇಚ್ಚಿಸುವ ತಂಡಗಳು ತಂಡ ಸೂಚಿಸಿದ ನಿಬಂಧನೆಗಳನ್ನು ಪಾಲಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಫ್ರೆಂಡ್ಸ್ ಕ್ರಿಕೆಟ್ ತಂಡದ ಮುಖ್ಯಸ್ಥರನ್ನು ಹಾಗು ಮೊ. 9945460430, 9448822346 ಇಲ್ಲಿ ಸಂಪರ್ಕಿಸಲು ಕೋರಿದೆ.


