Tuesday, May 19, 2026
Google search engine
Homeಮುಖಪುಟಬೆಂಗಳೂರು ಉತ್ತರ ಜಿಲ್ಲೆಯಾಗಿ ತುಮಕೂರನ್ನು ಮಾಡಿ-ಡಾ.ಜಿ.ಪರಮೇಶ್ವರ್ ಮನವಿ

ಬೆಂಗಳೂರು ಉತ್ತರ ಜಿಲ್ಲೆಯಾಗಿ ತುಮಕೂರನ್ನು ಮಾಡಿ-ಡಾ.ಜಿ.ಪರಮೇಶ್ವರ್ ಮನವಿ

ತುಮಕೂರು ಬೆಂಗಳೂರಿಗೆ ಹತ್ತಿರ ಇರುವ ಹಿನ್ನೆಲೆಯಲ್ಲಿ ತುಮಕೂರನ್ನು ಸೇರಿಸಿ ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಕರ್ನಾಟಕ ಸರ್ಕಾರದ ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಒತ್ತಾಯಿಸಿದರು.

ತುಮಕೂರು ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಮಂಗಳವಾರ ನಡೆದ ಕರ್ನಾಟಕ ಸರ್ಕಾರದ 3ನೇ ವರ್ಷದ ಸಾಧನ ಸಮಾವೇಶದಲ್ಲಿ ಮಾತನಾಡಿದ ಅವರು, ತುಮಕೂರು ಬೆಂಗಳೂರಿಗೆ ಕೇವಲ 60 ಕಿ.ಮೀ ದೂರವಿದೆ. ಹಾಗಾಗಿ ತುಮಕೂರನ್ನು ಸೇರಿಸಿ ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಾಗಬೇಕು ಎಂದು ಮನವಿ ಮಾಡಿದರು.

ಈ ಹಿಂದೆಯೂ ಪರಮೇಶ್ವರ್ ತುಮಕೂರನ್ನು ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಹೇಳಿದ್ದರು. ಇದಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆ ಬಗ್ಗೆ ಪ್ರಸ್ತಾವಿಸುವುದನ್ನು ಕೈಬಿಟ್ಟಿದ್ದರು.

ಈಗ ಮತ್ತೆ ಪುನರುಚ್ಚರಿಸಿರುವ ಡಾ.ಜಿ.ಪರಮೇಶ್ವರ್ ರಾಮನಗರವನ್ನು ಸೇರಿಸಿಕೊಂಡು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮಾಡಿರುವಂತೆಯೇ ತುಮಕೂರುನ್ನು ಸೇರಿಸಿ ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಮತ್ತು ಡಿಸಿಎಂ ಅವರಲ್ಲಿ ಮನವಿ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular