ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ. ನಾನು ಸಲ್ಲಿಸಿರುವ ರಾಜಿನಾಮೆಯನ್ನು ರಾಜ್ಯಪಾಲರು ಅಂಗೀಕರಿಸಲೇಬೇಕು ಎಂದು ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೇ.28ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಲೋಕಭವನಕ್ಕೆ ತೆರಳಿ ರಾಜಿನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಯವರಿಗೆ ಸಲ್ಲಿಸಿದ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.
ಮಾಧ್ಯಮಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಡಾ.ಜಿ.ಪರಮೇಶ್ವರ್, ಸಚಿವ ಪ್ರಿಯಾಂಕ್ ಖರ್ಗೆ ಇದ್ದರು.
ಇದಕ್ಕೂ ಮೊದಲು ಕಾವೇರಿ ನಿವಾಸದಲ್ಲಿ ಉಪಾಹಾರ ಕೂಟ ನಡೆಯಿತು. ಸಿದ್ದರಾಮಯ್ಯ ಸಂಪುಟದ ಸಚಿವರೆಲ್ಲರೂ ಭಾಗಿಯಾಗಿದ್ದರು. ಉಪಹಾರ ಕೂಟದಲ್ಲಿ ಸಿದ್ದರಾಮಯ್ಯ ಮಾತನಾಡಿ ನಾನು ರಾಜಿನಾಮೆ ಸಲ್ಲಿಸುವಂತೆ ಹೈಕಮಾಂಡ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ರಾಜಿನಾಮೆಯನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದು ಇದಕ್ಕೆ ಹಲವು ಸಚಿವರು ಕಣ್ಣೀರು ಹಾಕಿದರು ಎಂದು ತಿಳಿದು ಬಂದಿದೆ.


