ದ್ವಿಚಕ್ರ ವಾಹನದಲ್ಲಿ ಎಸ್.ಐ.ಆರ್ ಮತದಾರರ ನೋಂದಣಿಗೆ ಹೋಗುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು ಗ್ರಾಮ ಲೆಕ್ಕಾಧಿಕಾರಿ ಗಂಭೀರ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗೂಳೂರು ಸಮೀಪದ ಬೇವಿನಮರದಮ್ಮ ಗುಡಿ ಸಮೀಪ ಸಂಭವಿಸಿದೆ.
ಮೃತ ಗ್ರಾಮ ಲೆಕ್ಕಾಧಿಕಾರಿಯನ್ನು ಭುವನ ಎಂದು ಗುರುತಿಸಲಾಗಿದೆ. ತುಮಕೂರು ತಾಲೂಕು ಹೊಳಕಲ್ಲು ಗ್ರಾಮ ಪಂಚಾಯ್ತಿಯಲ್ಲಿಇ ಗ್ರಾಮ ಲೆಕ್ಕಾಧಿಕಾರಿಯಾಗಿ ಭುವನ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಲಾರಿ ಡಿಕ್ಕಿಯಿಂದ ಭುವನ ಅವರ ತಲೆಗೆ ಗಂಭೀರ ಗಾಯಗೊಂಡಿದ್ದು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಘಟನೆಯ ವಿಷಯ ತಿಳಿದ ಗ್ರಾಮ ಲೆಕ್ಕಾಧಿಕಾರಿಗಳು ಖಾಸಗಿ ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಆಸ್ಪತ್ರೆಗೆ ಭೇಟಿ ನೀಡಿದಾಗ ಪ್ರತಿಭಟನಾಕಾರರು ಡಿಸಿ ಕಾರಿಗೂ ಮುತ್ತಿಗೆ ಹಾಕಿದ ಘಟನೆ ನಡೆಯಿತು.


