ಭಾರತ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕೇವಲ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಿಗೆ ಅನ್ವಯವಾಗದೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಇದೇ ಮತದಾರರ ಪಟ್ಟಿ ಬಳಕೆ ಮಾಡುವುದರಿಂದ ಕಾಂಗ್ರೆಸ್ ಮುಖಂಡರು ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಒಂದೇ ಒಂದು ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಚಂದ್ರಶೇಖರಗೌಡ ತಿಳಿಸಿದ್ದಾರೆ.
ತುಮಕೂರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎಸ್.ಐ.ಆರ್ ಮತ್ತು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬAಧಿಸಿದಂತೆ ಜಿಲ್ಲಾ ಕಾಂಗ್ರೆಸ್ನ ಮಂಚೂಣಿ ಘಟಕಗಳ ಅಧ್ಯಕ್ಷರುಗಳು, ವಿವಿಧ ವಿಭಾಗಗಳ ಅಧ್ಯಕ್ಷರುಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರಕಾರ ನಮಗೇನು ಮಾಡಿಲ್ಲ ಎಂದು ನಿರ್ಲಕ್ಷ ತೋರಿದರೆ, ಪಕ್ಷದ ಜೊತೆಗೆ ನೀವು ಸಹ ಅಧಿಕಾರದಿಂದ ದೂರ ಉಳಿಯಬೇಕಾಗುತ್ತದೆ. ಹಾಗಾಗಿ ಎಸ್.ಸಿ, ಎಸ್.ಟಿ, ಓಬಿಸಿ, ಕಾರ್ಮಿಕ, ವಕೀಲರ ಸೆಲ್ಗಳ ಮುಖಂಡರು ಹಾಗೂ ಮಹಿಳಾ ವಿಭಾಗ, ರೈತ ವಿಭಾಗ, ನೆಹರು ಬಾಲಮಂಚ್ ಸೇರಿದಂತೆ ಎಲ್ಲಾ ಘಟಕಗಳ ಮುಖಂಡರುಗಳು ಮತ್ತು ಪದಾಧಿಕಾರಿಗಳು ಸಹ ತಮ್ಮ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಸ್.ಐ.ಆರ್. ಬಗ್ಗೆ ಗಮನಹರಿಸಿ, ಪಕ್ಷದಿಂದ ಅಧಿಕೃತವಾಗಿ ನೇಮಕವಾಗಿರುವ ಬಿಎಲ್ಓಗಳೊಂದಿಗೆ ನೇರ ಸಂಪರ್ಕದಲ್ಲಿದ್ದು, ಸರಿಯಾದ ದಾರಿಯಲ್ಲಿ ಎಸ್.ಐ.ಆರ್. ನಡೆಯುವಂತೆ ಮಾಡಬೇಕೆಂದು ಸಲಹೆ ನೀಡಿದರು.
ದೇಶದ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ನಗರಪಾಲಿಕೆ, ವಿವಿಧ ನಗರಸಭೆಗಳು, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಜಿ.ಪಂ, ತಾ.ಪಂ.ಗಳ ಚುನಾವಣೆಗಳಿಗೆ ಕಾರ್ಯಕರ್ತರು ಸಿದ್ದರಾಗಬೇಕು. ಪಕ್ಷದ ಕೆಲಸದಲ್ಲಿ ತೊಡಗಿರುವ ವ್ಯಕ್ತಿಗಳಿಗೆ ಹೆಚ್ಚು ಅವಕಾಶ ದೊರೆಯಲಿದೆ. ಹಾಗಾಗಿ ಹೆಚ್ಚು ಹೆಚ್ಚಾಗಿ ಸಂಘಟನೆಯಲ್ಲಿ ತೊಡಗುವಂತೆ ಕೋರಿದರು.
ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್.ರಾಮಕೃಷ್ಣ, ನರಸೀಯಪ್ಪ, ಎಸ್.ಸಿ. ಸೆಲ್ ಅಧ್ಯಕ್ಷ ಬಿ.ಜಿ.ನಿಂಗರಾಜು, ಎಸ್ಟಿ ಸೆಲ್ ಅಧ್ಯಕ್ಷ ಕುಮಾರಸ್ವಾಮಿ, ಓಬಿಸಿ ಸೆಲ್ ಅಧ್ಯಕ್ಷ ಅನಿಲ್ಕುಮಾರ್, ಅಸ್ಲಾಂ ಪಾಷ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಜಾತ, ಮಹಿಳಾ ಘಟಕದ ಭಾಗ್ಯಮ್ಮ, ಕೆಂಪಣ್ಣ, ಸೇವಾದಳದ ಶಿವಪ್ರಸಾದ್, ಕಿಸಾನ್ ಸೆಲ್ನ ಜಿ.ಎಲ್.ಗೌಡ, ಅಂಬರೀಷ್ ಇದ್ದರು.


