ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಗೆ ಮಣಿದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜಿನಾಮೆ ನೀಡಿದ್ದಾರೆ.
ನೀಟ್ ಹಗರಣದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆಗೆ ಒತ್ತಾಯಿಸಿ ದೇಶಾದ್ಯಂತ ವಿದ್ಯಾರ್ಥಿ ಯುವಜನ ಸಂಘಟನೆಗಳು ಮತ್ತು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ್ದವು. ಇದಕ್ಕೆ ಮಣಿದಿರುವ ಧರ್ಮೇಂದ್ರ ಪ್ರಧಾನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜಿನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ.
ನೀಟ್-ಯುಜಿ 2026 ಪರೀಕ್ಷೆಗೆ ಸಂಬಂಧಿಸಿದ ಬೆಳವಣಿಗಗಳ ನೈತಿಕ ಹೊಣೆಯನ್ನು ಮೊದಲ ದಿನದಿಂದಲೇ ತಾವು ಹೊತ್ತಿದ್ದು, ಪರಿಸ್ಥಿತಿಯಿಂದ ಎಂದಿಗೂ ಹಿಂದೆ ಸರಿಯಲಿಲ್ಲ ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಘೋಷಿಸುತ್ತಿದ್ದಂತೆಯೇ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಾವಿರಾರು ವಿದ್ಯಾರ್ಥಿಗಳು ಸಂಭ್ರಮಾಚರಣೆ ನಡೆಸಿದರು.


