ಪಶ್ಚಿಮಬಂಗಾಳದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ತೃಣಮೂಲ ಕಾಂಗ್ರೆಸ್ ಆಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭವಾನಿಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ ಎಂದು ಟಿಎಂಸಿ ಹೇಳಿಕೆಯಲ್ಲಿ ತಿಳಿಸಿದೆ.
ಸೆಪ್ಟೆಂಬರ್ 30ರಂದು ನಡೆಯಲಿರುವ ಉಪಚುನಾವಣೆಗೆ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಮಮತಾ ಬ್ಯಾನರ್ಜಿ ಜೊತೆಯಲ್ಲಿ ಜಂಗಿಪುರ ಕ್ಷೇತ್ರದಿಂದ ಜಾಕಿರ್ ಹುಸೇನ್, ಸಂಸರ್ ಗಂಜ್ ಕ್ಷೇತ್ರದಿಂದ ಅಮಿರುಲ್ಲಾ ಇಸ್ಲಾಂ ಸ್ಪರ್ಧಿಸಲಿದ್ದಾರೆ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ.
ಈ ವರ್ಷದ ಆರಂಭದಲ್ಲಿ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರು ಸೋತದ್ದರಿಂದ ಸೆಪ್ಟೆಂಬರ್ 5ರೊಳಗೆ ಅವರು ಶಾಸಕರಾಗಿ ಆಯ್ಕೆಯಾಗಬೇಕು.
ಕೆಲವು ದಿನಗಳ ಹಿಂದೆ ಕೊವಿಡ್-19 ನಿಯಂತ್ರಣದಲ್ಲಿರುವುದರಿಂದ ಬಾಕಿ ಇರುವ ಉಪಚುನಾವಣೆಗಳ ದಿನಾಂಕವನ್ನು ತಕ್ಷಣವೇ ಘೋಷಿಸಬೇಕು ಎಂದು ಮಮತಾ ಬ್ಯಾನರ್ಜಿ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದರು. ಜತೆಗೆ ಜನರ ಪ್ರಜಾಪ್ರಭುತ್ವದ ಹಕ್ಕುಗಳನ್ನು ಮೊಟುಕುಗೊಳಿಸಬಾರದು’ ಎಂದು ಹೇಳಿದ್ದರು.