ಕೊವಿಡ್ ಬಿಕ್ಕಟ್ಟಿನ ನಿರ್ವಹಣೆಯ ವೈಫಲ್ಯದಿಂದ ಗುಜರಾತ್ ಮುಖ್ಯಮಂತ್ರಿ ವಿಜಯ ರೂಪಾನಿ ರಾಜಿನಾಮೆ ನೀಡಿದ್ದರೆ ಜನ ಮೆಚ್ಚುತ್ತಿದ್ದರು ಎಂದು ಶಾಸಕ ಜಿಗ್ನೇಶ್ ಮೇವಾನಿ ಹೇಳಿದ್ದಾರೆ.
ರಾಜ್ಯದಲ್ಲಿ 2022ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಲೆಕ್ಕಾಚಾರದಿಂದ ಮುಖ್ಯಮಂತ್ರಿಗಳಿಂದ ರಾಜಿನಾಮೆ ಹೊರಬಿದ್ದಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಭರತ್ ಸಿಂಗ್ ಸೋಲಂಕಿ, ಕೊವಿಡ್ ನಿರ್ವಹಣೆಯಲ್ಲಿ ಲೋಪ ಮತ್ತು ಸಾರ್ವಜನಿಕರಿಗೆ ಪರಿಹಾರ ನೀಡುವಲ್ಲಿ ವಿಜಯ ರೂಪಾನಿ ವಿಫಲರಾಗಿದ್ದಾರೆ. ಬಿಜೆಪಿ ಮುಖ ಉಳಿಸಿಕೊಳ್ಳಲು ರೂಪಾಯಿ ಅವರಿಂದ ರಾಜಿನಾಮೆ ಪಡೆದಿದೆ ಎಂದು ವ್ಯಂಗ್ಯ ಮಾಡಿದ್ದಾರೆ.
ಯುವ ಮುಖಂಡ ಹಾಗೂ ಕಾಂಗ್ರೆಸ್ ಕಾರ್ಯಾಧ್ಯಕ್ಷ ಆರ್ಧಿಕ್ ಪಟೇಲ್, ರೂಪಾನಿ ರಾಜಿನಾಮೆ ಜನರನ್ನು ದಿಕ್ಕುತಪ್ಪಿಸುವ ತಂತ್ರದ ಭಾಗವಾಗಿದೆ. ಆಡಳಿತ ನಡೆಸುವಲ್ಲಿ ವೈಫಲ್ಯ ಕಂಡುಬಂದಿದೆ. ಕೊವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಜನರು ಸತ್ತರು. ಸ್ಮಶಾನದಲ್ಲಿ ಸುಡುವುದು ಕೂಡ ಕಷ್ಟವಾಗಿತ್ತು. ಇದರಿಂದ ಗುಜರಾತ್ ಹೆಸರಿಗೆ ದಕ್ಕೆಯಾಗಿದೆ ಎಂದು ಟೀಕಿಸಿದ್ದಾರೆ.

ದೆಹಲಿಯಿಂದಲೇ ರಿಮೋಟ್ ಕಂಟ್ರೋಲ್ ಮೂಲಕ ಯಾವಾಗಲೂ ಗುಜರಾತ್ ಆಡಳಿತವನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಗುಜರಾತ್ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ ಎಂದು ದೂರಿದ್ದಾರೆ.
ಹಣದುಬ್ಬರದಿಂದ ಗುಜರಾತ್ ವ್ಯಾಪಾರಿಗಳು ಮತ್ತು ಜನತೆ ತೊಂದರೆ ಅನುಭವಿಸುತ್ತಿದ್ದಾರೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಉದ್ದಿಮೆಗಳು ಬಾಗಿಲು ಮುಚ್ಚಿವೆ. ಯುವಕರು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಆರು ತಿಂಗಳ ಅವಧಿಯಲ್ಲಿ ಬಿಜೆಪಿ ಆಡಳಿತ ಇರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳನ್ನು ಬಿಜೆಪಿ ಬದಲಾವಣೆ ಮಾಡಿದೆ. ಜಾರ್ಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಮಾರ್ಚ್ ತಿಂಗಳಲ್ಲಿ ರಾಜಿನಾಮೆ ನೀಡಿದ್ದರು. ನಂತರ ತೀರ್ಧಸಿಂಗ್ ರಾವತ್ ಮುಖ್ಯಮಂತ್ರಿಯಾಗಿದ್ದಾರೆ.
ಜುಲೈ ತಿಂಗಳಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯಪಾಲರಿಗೆ ರಾಜಿನಾಮೆ ಸಲ್ಲಿಸಿದ್ದರು. 75 ವರ್ಷ ಮೀರಿದ ಹಿನ್ನೆಲೆಯಲ್ಲಿ ರಾಜಿನಾಮೆ ಪಡೆಯಲಾಗಿದೆ ಎಂದು ಬಿಜೆಪಿ ಸಮರ್ಥಿಸಿಕೊಂಡಿತ್ತು. ಯಡಿಯೂರಪ್ಪ ಒಂದು ವರ್ಷ ಪೂರೈಸಿದ ಸಂದರ್ಭದಲ್ಲೇ ಅವರ ರಾಜಿನಾಮೆ ಪಡೆದಿತ್ತು. ಹೀಗಾಗಿ ಯಡಿಯೂರಪ್ಪ ಕಣ್ಣೀರು ಹಾಕಿದ್ದರು.
ಈಗ ಬಸವರಾಜ ಬೊಮ್ಮಾಯಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಯಡಿಯೂರಪ್ಪ ರಾಜಿನಾಮೆ ನೀಡಿದ 2 ತಿಂಗಳ ಬಳಿಕ ಗುಜರಾತ್ ಮುಖ್ಯಮಂತ್ರಿ ವಿಜಯ ರೂಪಾನಿ ರಾಜಿನಾಮೆ ಕೊಟ್ಟಿದ್ದು ಮುಂದೆ ಯಾರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.


