ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಪಂಕಜ್ ಗುಪ್ತ ಮರು ಆಯ್ಕೆಯಾಗಿದ್ದಾರೆ.
ಪಕ್ಷದ ಸಂವಿಧಾನದಲ್ಲಿ ಉಲ್ಲೇಖಿಸಿದ್ದ ಒಬ್ಬ ವ್ಯಕ್ತಿ 2ಕ್ಕಿಂತ ಹೆಚ್ಚು ಬಾರಿ ಒಂದೇ ಹುದ್ದೆಯಲ್ಲಿ ನಿರಂತರವಾಗಿ ಮುಂದುವರಿಯಬಾರದು ಎಂಬುದಕ್ಕೆ ಈ ವರ್ಷದ ಆರಂಭದಲ್ಲಿ ತಿದ್ದುಪಡಿ ತರಲಾಗಿತ್ತು.
ಸಂವಿಧಾನದ ತಿದ್ದುಪಡಿಯಲ್ಲಿ ಎರಡಕ್ಕಿಂತ ಹೆಚ್ಚು ಬಾರಿ ಒಬ್ಬ ವ್ಯಕ್ತಿ ಒಂದೇ ಹುದ್ದೆಯಲ್ಲಿ ಮುಂದುವರಿಯಬಹುದು ಅಥವಾ ಮರು ಆಯ್ಕೆಯಾಗಬಹುದು ಎಂದು ಹೇಳಿದೆ. ಹೀಗಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಕೇಜ್ರಿವಾಲ್ ಅವಧಿ 2019ರ ಏಪ್ರಿಲ್ ಗೆ ಮುಕ್ತಾಯವಾಗಿತ್ತು. ಕೊವಿಡ್-19ರ ಹಿನ್ನೆಲೆಯಲ್ಲಿ ಕಾರ್ಯಕಾರಿ ಸಮಿತಿ ಸಭೆಯನ್ನು ಮುಂದೂಡುತ್ತಾ ಬರಲಾಗಿತ್ತು. ಹಿಂದೆ ಒಂದು ಬಾರಿಗೆ ಆಯ್ಕೆಯಾದರೆ ಮೂರು ವರ್ಷ ಅವಧಿ ಇತ್ತು. ಜನವರಿ 2021ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದ ಪರಿಣಾಮ 5 ವರ್ಷದವರೆಗೆ ಅವಧಿ ವಿಸ್ತರಿಸಲಾಗಿದೆ.