Friday, September 20, 2024
Google search engine
Homeಮುಖಪುಟವಿಧಾನಸಭೆ ಚುನಾವಣೆಯಲ್ಲಿ ಮೋದಿ ಅಲೆ ಕೆಲಸ ಮಾಡದು - ಬಿ.ಎಸ್.ಯಡಿಯೂರಪ್ಪ

ವಿಧಾನಸಭೆ ಚುನಾವಣೆಯಲ್ಲಿ ಮೋದಿ ಅಲೆ ಕೆಲಸ ಮಾಡದು – ಬಿ.ಎಸ್.ಯಡಿಯೂರಪ್ಪ

ಬಿಜೆಪಿ ಮುಖಂಡರು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಸಂಪರ್ಕದಲ್ಲಿದ್ದು ಉಪಚುನಾವಣೆ, ವಿಧಾನಪರಿಷತ್ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಕೆಲಸ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ದಾವಣಗೆರೆಯಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ನಿರ್ಲಕ್ಷ್ಯ ಮಾಡದಂತೆ ಬಿಜೆಪಿ ಮುಖಂಡರಿಗೆ ಸಲಹೆ ನೀಡಿದ್ದಾರೆಂದು ಡೆಕನ್ ಹೆರಾಲ್ಡ್ ವರದಿ ಮಾಡಿದೆ.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದು, ಚುನಾವಣೆಗಾಗಿ ಅವರದೇ ತಂತ್ರಗಾರಿಕೆ ಮಾಡುತ್ತಿದ್ದಾರೆ. ಹಾಗಾಗಿ ಬೂತ್ ಮಟ್ಟದಲ್ಲಿ ಬಿಜೆಪಿ ಪಕ್ಷವನ್ನು ಬಲಪಡಿಸಲು ಶ್ರಮಿಸಬೇಕು ಎಂದರು.

ನರೇಂದ್ರ ಮೋದಿ ಹೆಸರು ಹೇಳಿ ಲೋಕಸಭೆಯನ್ನು ಗೆಲ್ಲಬಹುದು. ಆದರೆ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಆಗುವುದಿಲ್ಲ. ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋತಿರುವುದು ತಪ್ಪು ಮಾಹಿತಿ ಹೋಗಿದೆ ಎಂದು ಹೇಳಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅಲೆ ಕೆಲಸ ಮಾಡುತ್ತದೆ. ಪಕ್ಷ ಗೆಲುವು ಸಾಧಿಸುತ್ತದೆ. ಮೋದಿ ಮತ್ತೆ ಪ್ರಧಾನಿ ಆಗುವುದರಲ್ಲಿ ಎರಡನೇ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular