ಟೂಲ್ ಕಿಟ್ ಪ್ರಕರಣದ ಸಂಬಂಧ ಹೈಕೋರ್ಟ್ ನೀಡಿರುವ ಅದೇಶವನ್ನು ಪ್ರಶ್ನಿಸಿ ಛತ್ತೀಸ್ ಗಡ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ವಜಾಗೊಳಿಸಿದೆ.
ಮುಖ್ಯನಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಹಿಮ ಕೋಹ್ಲಿ ಅವರಿದ್ದ ಪೀಠ “ತಾನು ಈ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಢುವುದಿಲ್ಲ. ಹೈಕೋರ್ಟ್ ಈ ಪ್ರಕರಣವನ್ನು ಇತ್ಯರ್ಥಪಡಿಸುತ್ತದೆ. ಹಾಗಾಗಿ ಮೇಲ್ಮನವಿ ವಜಾ ಮಾಡಲಾಗಿದೆ” ಎಂದು ಹೇಳಿದೆ ಎಂಬುದನ್ನು ಬಾರ್ & ಬೆಂಚ್ ವರದಿಯಲ್ಲಿ ತಿಳಿಸಿದೆ.
ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಮತ್ತು ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಟ್ವೀಟ್ಟರ್ ಖಾತೆಯಲ್ಲಿ ಕಾಂಗ್ರೆಸ್ ದಾಖಲೆಗಳನ್ನು ಬಳಸಿ ಇದು ಕಾಂಗ್ರೆಸ್ ಟೂಲ್ ಕಿಟ್ ಎಂದು ಬರೆದಿದ್ದರು. ಕಾಂಗ್ರೆಸ್ ದಾಖಲೆಗಳನ್ನು ತಿದ್ದಲಾಗಿದೆ ಎಂದು ಆರೋಪಿಸಿತ್ತು.
ಈ ಇಬ್ಬರು ಬಿಜೆಪಿ ಮುಖಂಡರ ವಿರುದ್ಧ ಛತ್ತೀಸ್ ಗಡ ಎನ್.ಎಸ್.ಯು.ಐ. ಅಧ್ಯಕ್ಷ ಆಕಾಶ್ ಶರ್ಮಾ ದೂರು ನೀಡಿದ ಮೇರೆಗೆ ಪೊಲೀಸರು ಎಫ್.ಐ.ಆರ್. ದಾಖಲಿಸಿದ್ದರು.
ಪ್ರಕರಣದ ವಿರುದ್ಧ ರಮಣ್ ಸಿಂಗ್ ಮತ್ತು ಸಂಬಿತ್ ಪಾತ್ರ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಪ್ರತ್ಯೇಕ ಆದೇಶ ನೀಡಿ ತನಿಖೆಗೆ ತಡೆಯಾಜ್ಟೆ ನೀಡಿತ್ತು. ಜೊತೆಗೆ ರಮಣ್ ಸಿಂಗ ಹಾಗೂ ಸಂಬಿತ್ ಪಾತ್ರ ‘ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತಂದಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ’. ‘ಎರಡು ರಾಜಕೀಯ ಪಕ್ಷಗಳ ನಡುವಿನ ವಿರೋಧದಿಂದ ಎಫ್.ಐ.ಆರ್ ದಾಖಲಿಸಲಾಗಿದೆ’ ಎಂದು ಹೇಳಿತ್ತು.