Monday, March 16, 2026
Google search engine
Homeಮುಖಪುಟಗಾಂಧಿ ನಡಿಗೆ ಕಾರ್ಯಕ್ರಮ ರಾಜ್ಯಾದ್ಯಂತ ವಿಸ್ತರಿಸಲು ಕಾಂಗ್ರೆಸ್ ಚಿಂತನೆ

ಗಾಂಧಿ ನಡಿಗೆ ಕಾರ್ಯಕ್ರಮ ರಾಜ್ಯಾದ್ಯಂತ ವಿಸ್ತರಿಸಲು ಕಾಂಗ್ರೆಸ್ ಚಿಂತನೆ

ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ ಗಾಂದಿ ನಡಿಗೆ ಕಾರ್ಯಕ್ರಮ ರೂಪಿಸಿದ್ದು, ಸೆಪ್ಟೆಂಬರ್ 26ರಂದು ದೇವನಹಳ್ಳಿ ಮತ್ತು 29ರಂದು ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಂದಿನ ತಿಂಗಳು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮ ನಡೆಸಲಾಗುವುದು ಎಂದರು.

ನವೆಂಬರ್ ತಿಂಗಳಲ್ಲಿ ಚಿಕ್ಕಬಳ್ಳಾಪುರ ವ್ಯಾಪ್ತಿಯ ಬಾಗೇಪಲ್ಲಿ, ಗೌರಿಬಿದನೂರಿನಲ್ಲಿ 10 ರಿಂದ ಸಂಜೆ 6ರವರೆಗೂ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್ ಭಾಗವಹಿಸಲಿದ್ದಾರೆ.

ಗಾಂದಿ ನಡಿಗೆ ಕಾರ್ಯಕ್ರಮವನ್ನು ರಾಜ್ಯವ್ಯಾಪಿ ನಡೆಸಲು ಪ್ರತಿಪಕ್ಷ ನಾಯಕರು ಮತ್ತು ಅಧ್ಯಕ್ಷರ ಜೊತೆ ಚರ್ಚಿಸಲಾಗುವುದು. ರಾಜ್ಯ ಹಾಗೂ ದೇಶದಲ್ಲಿ ರಾಜಕಾರಣ ಹದಗೆಟ್ಟಿದ್ದು ಸ್ವಾತಂತ್ರ್ಯ ಹೋರಾಟದದಲ್ಲಿ ಭಾಗವಹಿಸದೇ ಇರುವವರ ಕೈಯಲ್ಲಿ ದೇಶದ ಅಧಿಕಾರ ಸಿಕ್ಕಿದೆ. ದೇಶಕ್ಕೆ ಸ್ವಾತಂತ್ರ್ಯ ತಂದವರನ್ನು ಮೂಲೆಗುಂಪು ಮಾಡುವ ಪ್ರಯತ್ನ ನಡೆಯುತ್ತಿದೆ. ಬಿಜೆಪಿಯವರು ಅಧಿಕಾರಕ್ಕೆ ಬಂದ ನಂತರ ಅಪಪ್ರಚಾರ ಮಾಡುತ್ತಿದೆ ಎಂದು ದೂರಿದರು.

ಕಾಂಗ್ರೆಸ್, ಗಾಂಧಿ, ನೆಹರು, ಇಂದಿರಾಗಾಂದಿ ಅವರ ವಿರುದ್ದ ಅಪಪ್ರಚಾರ ನಡೆಸಲಾಗುತ್ತಿದೆ. ಬಿಜೆಪಿಯ ಸುಳ್ಳುಗಳು ಜನರಿಗೆ ಮನದಟ್ಟಾಗುತ್ತದೆ. ಹಾಗೆಂದು ನಾವು ಸುಮ್ಮನೆ ಕೂರದೆ ಜನರಲ್ಲಿ ಅರಿವು ಮೂಡಿಸಲು ಪ್ರಯತ್ನ ಮಾಡುತ್ತೇವೆ. ಕಾರ್ಯಕ್ರಮ ರೂಪಿಸಿದ್ದೇವೆ ಎಂದರು.

ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಗಾಂಧಿ ನಡಿಗೆ ಕಾರ್ಯಕ್ರಮದ ಮೂಲಕ ಕಾಂಗ್ರೆಸ್ ತತ್ವ, ಸಿದ್ದಾಂತ, ಕೊಡುಗೆ, ವಿಧಾರಧಾರೆ ವಿವರಿಸಲಾಗುವುದು. ಆ ಮೂಲಕ ಜನರಿಗೆ, ಯುವ ಪೀಲೀಗೆಗೆ ಮಾರ್ಗದರ್ಶನ ನೀಡುವ ಪ್ರಯತ್ನ ಮಾಡಲಾಗುತ್ತಿದ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ವತಿಯಿಂದ ಮುಂದಿನ ತಿಂಗಳು ಗಾಂದಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮ ಹಮ್ಮಿಕೊಂಡಿದೆ. ಎಲ್ಲಾ ಪಂಚಾಯಿತಿ, ಬ್ಲಾಕ್ ಗಳಲ್ಲಿ ಇದು ನಡೆಯಲಿದ್ದು, ಗಾಂಧೀಜಿ ಕೊಡುಗೆ, ಹೋರಾಟದ ಕುರಿತು ಮಾಹಿತಿ ನೀಡಲಾಗುವುದು ಎಂದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾದವರೂ ಸರ್ಕಾರ ಟೇಕ್ ಆಫ್ ಆಗಿಲ್ಲ. ಬೊಮ್ಮಾಯಿ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ. ಬಿಜೆಪಿ ಮನೆಯೊಂದು ಮೂರು ಬಾಗಿಲಂತಾಗಿದೆ. ಧವಳಗಿರಿ, ಕೇಶವಕೃಪ ಹಾಗೂ ದೆಹಲಿ ಹೈಕಮಾಂಡ್ ನಡುವೆ ಸರ್ಕಾರ ನಲುಗುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಅವರು ಭ್ರಮೆಯಲ್ಲಿದ್ದಾರೆ. ಅವರು ಅತಂತ್ರಕ್ಕೆ ಸಿಲುಕಿರುವುದರಿಂದ ಇಂಹತ ಹೇಳಿಕೆ ನೀಡಿದ್ದಾರೆ. ಜನರಿಗೆ ಸ್ವರ್ಗ ತೋರಿಸುವುದಾಗಿ ಹೇಳಿದ್ದ ಬಿಜೆಪಿ ನರಕ ದರ್ಶನ ಮಾಡುತ್ತಿದೆ ಎಂದು ಆಪಾದಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular