Monday, March 16, 2026
Google search engine
Homeಮುಖಪುಟಹಾಲಿನ ದರ ಹೆಚ್ಚಳ ಇಲ್ಲ - ಸಿಎಂ ಬೊಮ್ಮಾಯಿ

ಹಾಲಿನ ದರ ಹೆಚ್ಚಳ ಇಲ್ಲ – ಸಿಎಂ ಬೊಮ್ಮಾಯಿ

ಕರ್ನಾಟಕ ಹಾಲು ಒಕ್ಕೂಟಗಳ ಮಹಾಮಂಡಲ ಕೆಎಂಎಫ್ ಹಾಲಿನ ದರ ಹೆಚ್ಚಳ ಮಾಡುವಂತೆ ಸಲ್ಲಿಸಿದ ಮನವಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ.

ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ “ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ರೈತರು ತತ್ತರಿಸಿದ್ದಾರೆ. ಹಾಗಾಗಿ ಹಾಲಿನ ದರ ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬೊಮ್ಮಾಯಿ “ಪ್ರಸ್ತಾವನೆಯಲ್ಲಿ ಏನಿದೆ ಎಂಬುದು ಗೊತ್ತು. ಹಾಲಿನ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸುತ್ತಿದ್ದೀರಿ. ಬೇರೆ ರಾಜ್ಯಗಳಲ್ಲಿ ಹಾಲಿನ ದರ ಏನಿದೆ ಎಂಬುದನ್ನು ಹೋಲಿಕೆ ಮಾಡಿದ್ದೀರಿ. ಆದರೆ ಈ ಬಗ್ಗೆ ಯಾವುದೇ ಖಚಿತ ಭರವಸೆ ನೀಡಲು ಸಾಧ್ಯವಿಲ್ಲ” ಎಂದು ಹೇಳಿದರು ಎನ್ನಲಾಗಿದೆ.

ಕೆಎಂಎಫ್ ಅಧ್ಯಕ್ಷರು ಹಾಲಿನ ದರ 3 ರೂಪಾಯಿ ಹೆಚ್ಚಿಸುವಂತೆ ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ. ಬೆಲೆ ಏರಿಕೆಯ ನಡುವೆಯೇ ಹಾಲಿನ ದರ ಹೆಚ್ಚಳಕ್ಕೆ ಮುಖ್ಯಮಂತ್ರಿ ಯಾವುದೇ ಭರವಸೆ ನೀಡಿಲ್ಲ.

ಸಿಂಧಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಕ್ಟೋಬರ್ 30 ರಂದು ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿ ಹಾಲಿನ ದರ ಹೆಚ್ಚಳಕ್ಕೆ ಸಮ್ಮತಿ ನೀಡಿಲ್ಲ ಎಂದು ಹೇಳಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular