Sunday, September 8, 2024
Google search engine
Homeಮುಖಪುಟಸಚಿವ ಮಿಶ್ರಾ ನಿವಾಸದ ಹೊರಗೆ ನೋಟೀಸ್ ಅಂಟಿಸಿದ ಪೊಲೀಸರು

ಸಚಿವ ಮಿಶ್ರಾ ನಿವಾಸದ ಹೊರಗೆ ನೋಟೀಸ್ ಅಂಟಿಸಿದ ಪೊಲೀಸರು

ನಾಲ್ವರು ರೈತರು ಸೇರಿ ಎಂಟು ಮಂದಿ ಹತ್ಯೆ ಪ್ರಕರಣದ ಆರೋಪಿ ಅಶಿಶ್ ಅವರನ್ನು ಬಂಧಿಸಬೇಕು ಎಂಬ ಪ್ರತಿಪಕ್ಷಗಳ ಒತ್ತಡ ಹೆಚ್ಚುತ್ತಿದೆ. ಈ ನಡುವೆಯೇ ಉತ್ತರ ಪ್ರದೇಶ ಪೊಲೀಸರು ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಲಖಿಂಪುರಖೇರಿಯ ನಿವಾಸದ ಹೊರಗೆ ನೋಟಿಸ್ ಅಂಟಿಸಿ ಹೋಗಿದ್ದಾರೆ.

ಅಕ್ಟೋಬರ್ 8ರೊಳಗೆ ಅಶಿಶ್ ಮಿಶ್ರಾ ಖುದ್ದು ಹಾಜರಾಗುವಂತೆ ಪೊಲೀಸರು ನೋಟೀಸ್ ನಲ್ಲಿ ತಿಳಿಸಿದ್ದಾರೆಂದು ವರದಿಯಾಗಿದೆ.

ಅಶಿಶ್ ಮಿಶ್ರಾ ಅವರು ಸಮನ್ಸ್ ತೆಗೆದುಕೊಳ್ಳಲು ಮನೆಯಲ್ಲಿ ಇರಲಿಲ್ಲ. ಆದರೆ ಕಾನೂನು ಪ್ರಕ್ರಿಯೆ ಮುಂದುವರಿಸಲಾಗಿದೆ. ಈ ನಡುವೆ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರೈತರ ಹತ್ಯೆ ಪ್ರಕರಣದ ಆರೋಪಿಗಳ ಬಂಧನ ಏಕಿಲ್ಲ ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದ್ದಲ್ಲದೆ ಯಥಾಸ್ಥಿತಿ ವರದಿ ನೀಡುವಂತೆ ಸೂಚಿಸಿದ ಕೆಲವೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಅಶಿಶ್ ನಿವಾಸಕ್ಕೆ ಪೊಲೀಸರು ನೋಟಿಸ್ ಅಂಟಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular