ಲಖಿಂಪುರ ಖೇರಿ ನಾಲ್ವರು ರೈತರ ಹತ್ಯಾ ಆರೋಪಿ ಅಶಿಶ್ ಮಿಶ್ರಾ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯ 14 ದಿನಗಳ ನ್ಯಾಯಾಂಗ ವಶಕ್ಕೆ ನೀಡಿದೆ.
ಅಕ್ಟೋಬರ್ 09ರಂದು ಎಸ್ಐಟಿ ಮುಂದೆ ಹಾಜರಾದ ಅಶಿಶ್ ಅವರನ್ನು ಸತತ 12 ಗಂಟೆಗಳ ಕಾಲ ಪ್ರಶ್ನೆ ಮಾಡಲಾಯಿತು. ಎಸ್ಐಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಅಶಿಶ್ ಸಮರ್ಪಕ ಉತ್ತರ ನೀಡಲಿಲ್ಲ ಮತ್ತು ವಿಚಾರಣೆಗೆ ಸಹಕಾರ ನೀಡಲಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಅಶಿಶ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ನಂತರ 14 ದಿನಗಳ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ತಮ್ಮ ವಶಕ್ಕೆ ನೀಡುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರನ್ನು ಪೊಲೀಸರು ಮನವಿ ಮಾಡಿದರು. ಆದರೆ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರು ಆರೋಪಿ ಅಶಿಶ್ ಅವರನ್ನು ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.