ಉತ್ತರ ಪ್ರದೇಶದ ಜವಾರ್ ಗ್ರಾಮದ ದಲಿತ ಮಹಿಳೆಯೊಬ್ಬರು ದನಗಳಿಗೆ ಹುಲ್ಲು ಕೊಯ್ದುತರಲು ಹೊಲಕ್ಕೆ ಹೋಗಿದ್ದಾಗ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ ಜವಾರ್ ಗ್ರಾಮದ ಸಮೀಪದ ಹೊಲಕ್ಕೆ ಹೋಗಿದ್ದ ಮಹಿಳೆ ಹುಲ್ಲು ಕೊಯ್ಯುತ್ತಿದ್ದರು. ಆಗ ಅಲ್ಲಿಗೆ ಬಂದ ಅದೇ ಗ್ರಾಮದ ಇಬ್ಬರು ಪುರುಷರು ದಲಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾರೆ ಎಂದು ಡಿಸಿಪಿ ವೃಂದ ಶುಕ್ಲ ಹೇಳಿದ್ದಾರೆ.
ಈ ಸಂಬಂಧ ಎಫ್ಐಆರ್ ದಾಖಲಿಸಲಾಗಿದೆ. ಭಾನುವಾರ ಬೆಳಗ್ಗೆ 9.30 ರಿಂದ 10.30ರ ನಡುವೆ ಹೊಲದ ಬಯಲಿನಲ್ಲೇ ಸಾಮೂಹಿಕ ಅತ್ಯಾಚಾರ ನಡೆದಿದೆ. ಆರೋಪಿಗಳು ಸಂತ್ರೆಸ್ತೆಗೆ ಪರಿಚಯವಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಮುಖ ಆರೋಪಿ ಮಾದಕದ್ರವ್ಯ ವ್ಯಸನಿಯಾಗಿದ್ದು ಆತ ಮೊದಲು ಬಂದು ದಲಿತ ಮಹಿಳೆಯನ್ನು ಹೊಲದಲ್ಲಿ ಎಳೆದಾಡಿದ್ದಾನೆ. ನಂತರ ಆಕೆಯನ್ನು ಬಲತ್ಕಾರ ಮಾಡಿದ್ದಾನೆ. ಬಳಿಕ ಇನ್ನೊಬ್ಬ ಆರೋಪಿ ಬಂದು ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಅತ್ಯಾಚಾರ ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ನಡೆದಿದೆ. ಇದುವರೆಗೂ ಆರೋಪಿಗಳನ್ನು ಬಂಧಿಸಿರುವ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಶೀಘ್ರವೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.