Thursday, September 19, 2024
Google search engine
Homeಮುಖಪುಟಕುಮಾರಸ್ವಾಮಿಗೆ ಹತಾಶೆ ಕಾಡುತ್ತಿದೆ - ಉಗ್ರಪ್ಪ

ಕುಮಾರಸ್ವಾಮಿಗೆ ಹತಾಶೆ ಕಾಡುತ್ತಿದೆ – ಉಗ್ರಪ್ಪ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಇತ್ತೀಚಿನ ಕಾರ್ಯವೈಖರಿ ನೋಡಿದರೆ ಅವರು ಹತಾಶರಾಗಿರುವುದು ಕಂಡು ಬರುತ್ತದೆ. ಮನಬಂದಂತೆ ಮಾತನಾಡುತ್ತಿರುವ ಅವರು ರಾಜಕಾರಣದಲ್ಲಿ ಹೋಗುತ್ತಿರುವ ಹಾದಿ ನೋಡಿದರೆ ಕಳವಳ ಉಂಟು ಮಾಡುತ್ತದೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ತಮ್ಮ ಕೆಲಸ ಸಿದ್ದಾಂತಗಳ ಮೂಲಕ ಜನರ ವಿಶ್ವಾಸ ಗಳಿಸುವ ಪ್ರಯತ್ನ ನಡೆಸುತ್ತಿಲ್ಲ. ಬದಲಿಗೆ ಬೇರೆಯವರ ಮೇಲೆ ಆರೋಪ ಮಾಡಿ ಜನರನ್ನು ಆಕರ್ಷಿಸುತ್ತಿದ್ದಾರೆ ಎಂದು ದೂರಿದರು.

ಪ್ರತಿಪಕ್ಷ ನಾಯಕ ಸ್ಥಾನದಲ್ಲಿ ದೇವೇಗೌಡ, ದೇವರಾಜ ಅರಸು, ಬೊಮ್ಮಾಯಿ ಅವರಿದ್ದರು. ಸಿದ್ದರಾಮಯ್ಯ ಈಗ ಪ್ರತಿಪಕ್ಷ ಸ್ಥಾನದಲ್ಲಿದ್ದಾರೆ. ಅವರ ವಿರುದ್ದ ಮಾತನಾಡುವ ಸಂದರ್ಭದಲ್ಲಿ ಕುಮಾರಸ್ವಾಮಿ ಬಳಸಿರುವ ಪದಪ್ರಯೋಗ, ಪ್ರಜಾತಂತ್ರ ವ್ಯವಸ್ಥೆಗೆ ಸದನಕ್ಕೆ ತೋರುವ ಅಗೌರವ. ಪ್ರತಿಪಕ್ಷ ಸ್ಥಾನಕ್ಕಾಗಿ ನನ್ನ ಸರ್ಕಾರ ತೆಗೆದರು ಎಂದು ಹೇಳಿರುವುದು ಶೋಭೆ ತರುವುದಿಲ್ಲ ಎಂದರು.

ಕುಮಾರಸ್ವಾಮಿ ಅವರೇ ನಿಮ್ಮ ಕುಟುಂಬಕ್ಕೆ ಒಂದು ಹಿನ್ನೆಲೆ ಇದೆ. ಹೇಗೆ ಮಾತನಾಡಬೇಕು ಎಂಬುದನ್ನು ನಿಮ್ಮ ತಂದೆ ಅವರಿಂದ ಕಲಿಯಿರಿ. ಆ ಸ್ಥಾನ ಯಾವುದೇಕ್ಕೋ ಸಮಾನ. ಅದಕ್ಕೆ ಆಸೆಪಟ್ಟರು ಎಂದರೆ ವಿಧಾನಮಂಡಲಕ್ಕೆ ತೋರುವ ಅಗೌರವ. ಸ್ಪೀಕರ್ ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದ್ಧತೆ ಇದ್ದರೆ, ವಿಧಾನಮಂಡಲಕ್ಕೆ ಆಗಿರುವ ಅಗೌರವವನ್ನು ಸುಮೊಟೊ ಮೂಲಕ ಪ್ರಿವಿಲೇಜ್ ಮೋಷನ್ ಜಾರಿಗೊಳಿಸುವ ನಂಬಿಕೆ ಇದೆ ಎಂದು ಹೇಳಿದರು.

ಸರ್ಕಾರ ಬೀಳಲು ಕಾಂಗ್ರೆಸ್, ಸಿದ್ದರಾಮಯ್ಯ ಕಾರಣ ಎಂದು ಹೇಳುತ್ತಾರೆ. ವಿಧಾನಸೌಧದಲ್ಲಿ ಕಡತ ನೋಡಿದರೆ ತಿಳಿಯುತ್ತದೆ. ಸರ್ಕಾರ ಅಲುಗಾಡುವಾಗ ನೀವು ವಿದೇಶಕ್ಕೆ ಹೋಗಿದ್ದಿರಿ. ಸರ್ಕಾರ ಪತನವಾಗುವಾಗ ನಾನು ನಿಭಾಯಿಸುತ್ತೇನೆ ಎಂದು ಹೇಳಿದ್ದಿರಿ ನಿಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಮಮಡನೆ ಮಾಡಿದಾಗ ವಿಧಾನಸಭೆಯಲ್ಲಿ ನೀವು ಮಾಡಿದ ಭಾಷಣ ಮಾತುಗಳು ಎಲ್ಲವೂ ಕಡತದಲ್ಲಿದೆ ಎಂದು ನೆನಪಿಸಿದರು.

ಅಂದು ನೀವು ರಾಜಿನಾಮೆ ನೀಡಿ ಉತ್ತರ ನೀಡುವಾಗ ನನ್ನ ಸರ್ಕಾರ ತೆಗೆಯಲು ಕಾಂಗ್ರೆಸ್ ಕುತಂತ್ರ ಕಾರಣ ಎಂದು ಹೇಳ ಬಹುದಿತ್ತು. ಹೇಳಲಿಲ್ಲ ಯಾಕೆ? ಇಡೀ ಆಪರೇಷನ್ ಕಮಲಕ್ಕೆ ಬಿಜೆಪಿ ಅವರ ರಾಷ್ಟ್ರೀಯ ನಾಯಕತ್ವ ಕಾರಣ ಎಂದು ಹೇಳಿದ್ದಿರಿ ಎಂದು ಹೇಳಿದರು.

ನೀರಾವರಿ ಇಲಾಕೆಯಲ್ಲಿ 18 ಸಾವಿರ ಕೋಟಿ ಹಗರಣ ಆಗಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ. ಇದರಲ್ಲಿ 10-15 ರಷ್ಟು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪ ಇದೆ. ಪ್ರತಿಪಕ್ಷಗಳ ನಾಯಕರ ಮನೆ ಮೇಲೆ ಐಟಿ ದಾಳಿ ನಡೆದರೆ ಅಂದು ಸಂಜೆಯೇ ಏನೆಲ್ಲಾ ಸಿಕ್ಕಿದೆ ಎಂಬ ಮಾಹಿತಿ ಪ್ರಕಟವಾಗುತ್ತದೆ. ಆದರೆ ಮಾಜಿ ಮುಖ್ಯಮಂತ್ರಿ ಆಪ್ತರ ಮನೆ ದಾಳಿ ನಡೆದರೆ ಅದರ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಿಲ್ಲ ಎಂದು ಟೀಕಿಸಿದರು.

ಈ ಹಗರಣಕ್ಕೆ ಬಿಜೆಪಿ ನಾಯಕರೇ ನೇರ ಕಾರಣ. ಬಿಜೆಪಿ ರಾಜ್ಯ ಹಾಗೂ ರಾಷ್ಟ್ರ ನಾಯಕರಿಗೆ ಕಿಕ್ ಬ್ಯಾಕ್ ಹೋಗಿಬಿಟ್ಟಿದೆ. ನಾ ಖಾವೂಂಗಾ, ನಾಖಾನೆದೂಂಗ ಎನ್ನುವ ಮಿಸ್ಟರ್ ಮೋದಿ ನಿಮ್ಮ ಸರ್ಕಾರದ ವಿರುದ್ಧ ಐಟಿ, ಇಡಿ ದಾಳಿ ಆಗಿದೆ. ಇದರ ಬಗ್ಗೆ ಏನು ಹೇಳುತ್ತೀರಿ ಎಂದು ಪ್ರಶ್ನಿಸಿದರು.

ಐಟಿ, ಇಡಿ ಎರಡು ಇಲಾಖೆ ಕೇಂದ್ರದ ನಿಯಂತ್ರಣದಲ್ಲಿದೆ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕೆಂಬ ಇಚ್ಚೆ ಇದ್ದರೆ ಈ ಹಗರಣವನ್ನು ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು. ಸರ್ಕಾರ ತನಿಖೆಗೆ ಆದೇಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular