ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ಪ್ರತಿಪಕ್ಷ ಸ್ಥಾನಗಳು ಖಾಲಿ ಇರುವ ಹಿನ್ನೆಲೆಯಲ್ಲಿ ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಮತ್ತು ಶಾಸಕ ಜಿಗ್ನೇಶ್ ಮೇವಾನಿ ದೆಹಲಿಯಲ್ಲಿಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಹಾರ್ದಿಕ್ ಪಟೇಲ್ ಮತ್ತು ಜಿಗ್ನೇಶ್ ಮೇವಾನಿ ಅವರೊಂದಿಗೆ ರಾಹುಲ್ ಗಾಂಧಿ ಪ್ರತ್ಯೇಕವಾಗಿ ಚರ್ಚೆ ನಡೆಸಿದರು. ಬಳಿಕ ಹಿರಿಯ ಕಾಂಗ್ರೆಸ್ ನಾಯಕರ ನಿಯೋಗದ ಜೊತೆ ಚರ್ಚೆ ನಡೆಸಿದರು.
61 ವರ್ಷದ ಶಕ್ತಿ ಸಿನ್ಹಾ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಹಾಗೆಯೇ ಪ್ರತಿಪಕ್ಷ ನಾಯಕ ಸ್ಥಾನವೂ ರಾಜಿನಾಮೆ ನೀಡಿರುವುದರಿಂದ ಎರಡು ಹುದ್ದೆಗಳ ಖಾಲಿಯಾಗಿವೆ. ಈ ಹಿನ್ನೆಲೆಯಲ್ಲಿ ಇಬ್ಬರು ಯುವ ನಾಯಕರು ರಾಹುಲ್ ಜೊತೆ ಚರ್ಚಿಸಿ ನಮತರ ಪಟ್ನಾಕ್ಕೆ ತೆರಳಿದರು.
ಹಾರ್ದಿಕ್ ಪಟೇಲ್ ಮತ್ತು ಶಾಸಕ ಜಿಗ್ನೇಶ್ ಮೇವಾನಿ ಇಬ್ಬರೂ ಮಾಧ್ಯಮಗಳೊ ಜೊತೆ ಮಾತನಾಡಿ, ನಾವು ಪಾಟ್ನಾದಲ್ಲಿ ಕನ್ಹಯ್ಯ ಕುಮಾರ್ ಹಮ್ಮಿಕೊಂಡಿರುವ ಉಪಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುತ್ತೇವೆ. ರಾಹುಲ್ ಜೊತೆ ನಡೆಸಿದ ಸಭೆಯ ವಿವರಗಳನ್ನು ನಂತರ ಹಂಚಿಕೊಳ್ಳುತ್ತೇವೆ ಎಂದು ಹೇಳಿದರು.
ಕಳೆದ ಆರು ತಿಂಗಳಿಂದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಮತ್ತು ಪ್ರತಿಪಕ್ಷ ಸ್ಥಾನಗಳು ಖಾಲಿ ಇವೆ. ಇದುವರೆಗೆ ಅಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿದ್ದ ಅಮಿತ್ ಚೌಹಾಣ್ ಮತ್ತು ಪ್ರತಿಪಕ್ಷ ನಾಯಕರಾಗಿದ್ದ ಧನಾನಿ ರಾಜಿನಾಮೆ ನೀಡಿದ್ದಾರೆ. ಈ ಸ್ಥಾನಗಳಿಗೆ ನೇಮಕ ಮಾಡುವ ಸಂಬಂಧ ಗುಜರಾತ್ ನ 15 ಮಂದಿ ಹಿರಿಯ ಕಾಂಗ್ರೆಸ್ ನಾಯಕರ ನಿಯೋಗ ರಾಹುಲ್ ಭೇಟಿ ಮಾಡಿ ಚರ್ಚೆ ನಡೆಸಿದೆ.