Thursday, March 5, 2026
Google search engine
Homeಮುಖಪುಟಇಬ್ಬರು ಕಾಂಗ್ರೆಸ್ ನಾಯಕರು ಟಿಎಂಸಿ ಸೇರ್ಪಡೆ

ಇಬ್ಬರು ಕಾಂಗ್ರೆಸ್ ನಾಯಕರು ಟಿಎಂಸಿ ಸೇರ್ಪಡೆ

ಉತ್ತರ ಪ್ರದೇಶದ ಇಬ್ಬರು ಹಿರಿಯ ಕಾಂಗ್ರೆಸ್ ನಾಯಕರು ಉತ್ತರ ಬಂಗಾಳದ ಸಿಲುಗುರಿಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿಂದು ತೃಣಮೂಲ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ರಾಜೇಶ್ ಪತಿ ತ್ರಿಪತಿ, ಲಲಿತ್ ಪತಿ ತ್ರಿಪತಿ ಟಿಎಂಸಿ ಸೇರ್ಪಡೆಯಾದ ಕಾಂಗ್ರೆಸ್ ಮುಖಂಡರು.

ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವುದೇ ನಮ್ಮ ಉದ್ದೇಶವಾಗಿದೆ. ಕೇಂದ್ರದಲ್ಲಿ ಮಮತಾ ಬ್ಯಾನರ್ಜಿ ನಾಯಕತ್ವವನ್ನು ನೋಡಬೇಕಾಗಿದೆ ಎಂದು ಉಭಯ ಮುಖಂಡರು ಹೇಳಿದ್ದಾರೆ.

ರಾಜೇಶ್ ಪತಿ ತ್ರಿಪತಿ ಮಾಜಿ ಶಾಸಕರು. ಲಲಿತೇಶ್ವರ್ ತ್ರಿಪತಿ ಉತ್ತರ ಪ್ರದೇಶದ ಕಾಂಗ್ರೆಸ್ ಉಪಾಧ್ಯಕ್ಷರು ಮತ್ತು ಮಾಜಿ ಶಾಸಕರು ಆಗಿದ್ದಾರೆ.

ತೃಣಮೂಲ ಕಾಂಗ್ರೆಸ್ ಪಕ್ಷದ ಮೇಲಿನ ನಂಬಿಕೆ ಮತ್ತು ವಿಶ್ವಾಸ ಹೆಚ್ಚಾಗುತ್ತಿದೆ. ಬಿಜೆಪಿ ವಿರುದ್ದ ದೇಶಾದ್ಯಂತ ಹೋರಾಟ ಮಾಡಲು ಇದು ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಮಮತ ಬ್ಯಾನರ್ಜಿ ಹೇಳಿದ್ದಾರೆ.

ಗೋವಾದಲ್ಲೂ ಟಿಎಂಸಿ ವಿಸ್ತರಣೆ ಮಾಡಲು ಸಿದ್ದತೆ ಮಾಡಲಾಗುತ್ತಿದೆ. ಇದನ್ನು ತಡೆಯಲು ಬಿಜೆಪಿ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ತ್ರಿಪುರ, ಗೋವಾ, ಉತ್ತರಪ್ರದೇಶ ಹೀಗೆ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ವಿಸ್ತರಿಸುವ ಮುನ್ಸೂಚನೆಗಳು ಕಂಡುಬರುತ್ತಿವೆ. ಕೇಂದ್ರದ ನಾಯಕಿಯನ್ನಾಗಿಸುವ ಪ್ರಯತ್ನಗಳು ಬಹಿರಂಗವಾಗಿಯೇ ನಡೆದಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular