Wednesday, March 4, 2026
Google search engine
Homeಮುಖಪುಟಮೊದಲ ಬಾರಿಗೆ ಜಿ.ಪಂ, ತಾ.ಪಂ ಪ್ರತಿನಿಧಿಗಳ ಹೊರಗಿಟ್ಟು ಪರಿಷತ್ ಚುನಾವಣೆ - ಪರಿಹಾರ ಏನು?

ಮೊದಲ ಬಾರಿಗೆ ಜಿ.ಪಂ, ತಾ.ಪಂ ಪ್ರತಿನಿಧಿಗಳ ಹೊರಗಿಟ್ಟು ಪರಿಷತ್ ಚುನಾವಣೆ – ಪರಿಹಾರ ಏನು?

ವಿಧಾನ ಪರಿಷತ್ ಚುನಾವಣೆ ಘೋಷಣೆ ಆಗಿದ್ದು ರಾಜ್ಯದ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ. ಸ್ಥಳೀಯ ಸಂಸ್ಥೆಗಳಿಗೆ ಆಯ್ಕೆಯಾಗಿರುವ ಜನಪ್ರತಿನಿಧಿಗಳು ಮತ ಚಲಾಯಿಸುವ ಮೂಲಕ ವಿಧಾನ ಪರಿಷತ್ ಸದಸ್ಯರನ್ನು ಆಯ್ಮೆ ಮಾಡುವುದು ಸಂವಿಧಾನಬದ್ದ ಹಕ್ಕು. ಆದರೆ ಈ ಬಾರಿ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಗಳನ್ನೇ ಹೊರಗಿಟ್ಟು ಚುನಾವಣೆ ಸಡೆಸುತ್ತಿರುವುದು ಸಂವಿಧಾನವನ್ನು ಬುಡಮೇಲು ಮಾಡುವ ತಂತ್ರದ ಭಾಗವಾಗಿದೆ.

ಅಧಿಕಾರ ವಿಕೇಂದ್ರೀಕರಣದ ಪ್ರಮುಖ ಉದ್ದೇಶ ಜನರ ಬಳಿಗೆ ಅಧಿಕಾರವನ್ನು ಕೊಂಡೊಯ್ಯುವುದು. ಜನರಿಗೇ ಅಧಿಕಾರವನ್ನು ನೀಡುವುದು. ಹೀಗಾಗಿ ಪಂಚಾಯತ್ ರಾಜ್ ವ್ಯವಸ್ಥೆ ಅಸ್ತಿತ್ವಕ್ಕೆ ಬಂತು. ಇಂದು ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಗಳಿಗೆ ಚುನಾವಣೆ ನಡೆಸದೆ ಅವುಗಳನ್ನು ಜನಪ್ರತಿನಿಧಿಗಳಿಲ್ಲದ ಬ್ಯುರೋಕ್ರೆಟಿಕ್ ಸಂಸ್ಥೆಗಳನ್ನಾಗಿ ಪರಿವರ್ತಿಸಲಾಗಿದೆ.

ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಸದಸ್ಯರ ಅಧಿಕಾರವಧಿ ಪೂರ್ಣಗೊಂಡಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಪ್ರಮುಖ ಪಾತ್ರ ವಹಿಸುವ ಈ ಎರಡು ಘಟಕಗಳಿಗೆ ಒಂದು ದಿನವೂ ಜನಪ್ರತಿನಿಧಿಗಳಿಲ್ಲದೆ ಖಾಲಿ ಇರದಂತೆ ಚುನಾವಣೆ ನಡೆಸಬೇಕು. ಆದರೆ ರಾಜ್ಯ ಸರ್ಕಾರ ಕ್ಷೇತ್ರ ಪುನರ್ ವಿಂಗಡಣೆಗೆ ಆಯೋಗ ರಚಿಸಿ ಈ ಎರಡು ಘಟಕಗಳಿಗೆ ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡುವ ಮೂಲಕ ಚುನಾವಣೆಗೆ ಸ್ಪರ್ಧಿಸುವ, ಮತಚಲಾಯಿಸುವ ಆಯ್ಕೆಯಾಗುವ, ಅಧಿಕಾರ ಚಲಾಯಿಸುವ ಸಂವಿಧಾನ ಬದ್ದ ಹಕ್ಕುಗಳನ್ನು ಕಸಿದುಕೊಂಡಂತೆ ಆಗಿದೆ.

ರಾಜ್ಯದ 30 ಜಿಲ್ಲೆಗಳಲ್ಲಿ ಒಟ್ಟು 1083 ಜಿಲ್ಲಾ ಪಂಚಾಯತ್ ಸದಸ್ಯರ ಸ್ಥಾನಗಳು ಖಾಲಿ ಇವೆ. ಈವರೆಗೆ ಇದ್ದ ಜಿ.ಪಂ. ಸದಸ್ಯರ ಅವಧಿ ಪೂರ್ಣಗೊಂಡಿದೆ. ಇದರಿಂದ 1083 ಮಂದಿ ಸದಸ್ಯರು ಮತಹಕ್ಕಿನಿಂದ ವಂಚಿತರಾಗುವಂತೆ ಆಗಿದೆ. ಮತಹಕ್ಕು ಸಂವಿಧಾನ ನೀಡಿದ ಯಾರೂ ಪ್ರಶ್ನಿಸಲಾಗದ ಹಕ್ಕು. ಆದರೆ ಈ ಬಾರಿ ವಿಧಾನ ಪರಿಷತ್ ಚುನಾವಣೆಯಲ್ಲಿ ಜಿಲ್ಲಾ ಪಂಚಾಯತ್ ಪ್ರತಿನಿಧಿಗಳೇ ಮತಹಕ್ಕು ಚಲಾಯಿಸಲು ಅವಕಾಶ ಇಲ್ಲದಂತೆ ಮಾಡಲಾಗಿದೆ.

ರಾಜ್ಯದಲ್ಲಿ ಒಟ್ಟು 3903 ಮಂದಿ ತಾಲ್ಲೂಕು ಪಂಚಾಯತ್ ಸದಸ್ಯರಿದ್ದರು. ಅವರ ಅವಧಿಯೂ ಮುಕ್ತಾಯವಾಗಿದೆ. ತಾಲೂಕು ಪಂಚಾಯತ್ ಪ್ರತಿನಿಧಿಗಳು ಪರಿಷತ್ ಚುನಾವಣೆಯಲ್ಲಿ ಭಾಗಿಯಾಗದೆ ಮತಹಕ್ಕುಗಳಿಂದ ವಂಚಿತರಾಗುವಂತೆ ಆಗಿದೆ. ಅಂದರೆ ಒಟ್ಟು 4,986 ಮಂದಿ ಜನಪ್ರತಿನಿಧಿಗಳೇ ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವೈ.ಎಚ್.ಹುಚ್ಚಯ್ಯ”ವಿಧಾನಪರಿಷತ್ ಚುನಾವಣೆ ಸ್ಥಳೀಯ ಸಂಸ್ಥೆಗಳ ಮೂಲಕ ನಡೆಯಲಿದೆ. ಜಿಲ್ಲಾ ಪಂಚಾಯತ್ ಸದಸ್ಯರಿಗೆ ಮತದಾನದ ಹಕ್ಕು ಕೊಡದೆ ಪರಿಷತ್ ಚುನಾವಣೆ ನಡೆಸುವುದು ಅವರ ಹಕ್ಕನ್ನು ಕಸಿದುಕೊಂಡ ಹಾಗೆ. ಇದರ ವಿರುದ್ಧ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿ, ಜಿಲ್ಲಾ ಪಂಚಾಯತ್ ಚುನಾವಣೆ ನಂತರೇ ವಿಧಾನಪರಿಷತ ಚುನಾವಣೆ ನಡೆಸುವಂತೆ ಒತ್ತಾಯಿಸಬೇಕು ಎಂದರು.

“ಗ್ರಾಮ ಪಂಚಾಯತ್ ಸದಸ್ಯ ಕಾಡಶೆಟ್ಟಿಹಳ್ಳಿ ಸತೀಶ್ ಮಾತನಾಡಿ “ರಾಜ್ಯ ಸರ್ಕಾರ ಪರಿಷತ ಚುನಾವಣೆ ನಡೆಸುತ್ತಿರುವುದು ತಾಂತ್ರಿಕವಾಗಿ ಸರಿ ಇದೆ. ಆದರೆ ಪಂಚಾಯತ್ ರಾಜ್ ವ್ಯವಸ್ಥೆಯ ಅಡಿಪಾಯವೆಂದೇ ಹೇಳುವ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಘಟಕಗಳನ್ನು ಹೊರಗಿಟ್ಟು ವಿಧಾನಪರಿಷತ್ ಚುನಾವಣೆ ನಡೆಸುವುದು ಎಷ್ಟು ಸರಿ ಎಂಬುದು ಇಲ್ಲಿನ ಪ್ರಮುಖ ಪ್ರಶ್ನೆ. ಈ ಎರಡು ಘಟಕಗಳನ್ನು ಹೊರಗಿಟ್ಟು ಚುನಾವಣೆ ನಡೆಸುವುದಾದರೆ ಇಲ್ಲಿ ಆಯ್ಕೆಯಾಗುವ ಜನಪ್ರತಿನಿಧಿಗಳ ಪಾತ್ರವೇನು? ಎಂದು ಪ್ರಶ್ನಿಸಿದರು.

‘ಎಲ್ಲಾ ಪಕ್ಷಗಳ ಬಹುತೇಕ ಮುಖಂಡರು ಸೇರಿಕೊಂಡು ವಿಕೇಂದ್ರೀಕರಣದ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಪಂಚಾಯತ್ ರಾಜ್ ವ್ಯವಸ್ಥೆಯ ಮೂಲ ಘಟಕಗಳ ಅಧಿಕಾರವನ್ನು ಕಿತ್ತುಕೊಂಡಿದ್ದಾರೆ. ಸಂವಿಧಾನದ ಆಶಯಗಳಿಗೆ ವಿರುದ್ಧ ನಡೆದುಕೊಳ್ಳಲಾಗುತ್ತಿದೆ. ಪಂಚಾಯತ್ ವ್ಯವಸ್ಥೆಯಲ್ಲಿ ಸದಸ್ಯರ ಅವಧಿ ಪೂರ್ಣಗೊಳ್ಳುವ ಮೊದಲೇ ಚುನಾವಣೆ ನಡೆಯಬೇಕು ಎಂಬ ನಿಯಮವಿದೆ. ಆದರೆ ಇದನ್ನು ಬುಡಮೇಲು ಮಾಡಲಾಗಿದೆ. ಹಾಗಾದರೆ ಈ ಎರಡು ಘಟಕಗಳ ಪಾತ್ರವೇನು? ” ಎಂದು ಪ್ರಶ್ನಿಸಿದರು.

ಅಧಿಕಾರ ಕೇಂದ್ರೀಕರಣಗೊಳ್ಳುವಂತೆ ಮಾಡುವ ವ್ಯವಸ್ಥಿತ ತಂತ್ರಗಳು ಜನಪ್ರತಿನಿಧಿಗಳಿಂದಲೇ ನಡೆಯುತ್ತಿವೆ. ಗ್ರಾಮ ಪಂಚಾಯತ್, ನಗರಸಭೆ, ಪುರಸಭೆ, ನಗರಪಾಲಿಕೆ ಸದಸ್ಯರು ಮತಹಕ್ಕು ಹೊಂದಿದ್ದರೆ, ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಪ್ರತಿನಿಧಿಗಳು ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನದಲ್ಲಿ ಪಾಲ್ಗೊಳ್ಳದಂತೆ ಮಾಡಲಾಗಿದೆ. ಇದಕ್ಕೆ ಪರಿಹಾರ ಏನು? ಚರ್ಚೆಗಳು ಜನರ ನಡುವಿನಿಂದಲೇ ಹುಟ್ಟಿಬರಬೇಕಾಗಿದೆ.

ಕೆ.ಈ.ಸಿದ್ದಯ್ಯ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular