Monday, September 16, 2024
Google search engine
Homeಮುಖಪುಟಹುತಾತ್ಮ ರೈತರಿಗೆ 25 ಲಕ್ಷ ಪರಿಹಾರ ನೀಡಿ - ಸಿದ್ದು

ಹುತಾತ್ಮ ರೈತರಿಗೆ 25 ಲಕ್ಷ ಪರಿಹಾರ ನೀಡಿ – ಸಿದ್ದು

ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದು ಎಂದು ತಿಳಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ರೈತ ಹೋರಾಟಗಾರರಿಗೆ ಅಭಿನಂದನೆ ಹೇಳಿದ್ದಾರೆ.

ಕೃಷಿ ಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ಧತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕೆಂದು ಒತ್ತಾಯಿಸಿದ್ದಾರೆ.

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು. ಇದುವೇ ರೈತರ ಸ್ವಾತಂತ್ರ್ಯೋತ್ಸವ ಎಂದು ವಿಶ್ಲೇಷಿಸಿದ್ದಾರೆ.

ಕೃಷಿ ಕಾಯ್ದೆಯಷ್ಟೇ ಅಲ್ಲ, ಕೇಂದ್ರ ಬಿಜೆಪಿ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು. ಇದು ವಿರಮಿಸುವ ಕಾಲ ಅಲ್ಲ. ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ರೈತರ ಹೊರಾಟಕ್ಕೆ ಸಿಕ್ಕ ಗೆಲುವಿನ ಸ್ಫೂರ್ತಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧದ ಜನ ಹೋರಾಟಕ್ಕೆ ನಾಂದಿಯಾಗಲಿದೆ. ಪೆಟ್ರೋಲ್ -ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ಜನ ಅಣಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular