ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿರುವ ಎಐಸಿಸಿ ನಾಯಕ ರಾಹುಲ್ ಗಾಂಧಿ “ಚೀನಿ ಆಕ್ರಮಣದ ಸತ್ಯವನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.
ಚೀನಾನದೊಂದಿಗಿನ ಗಡಿ ಉದ್ವಿಗ್ನತೆಯನ್ನು ನಿಭಾಯಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ಇದು ಭಾರತದ ಪ್ರಾದೇಶಿಕ ಸಮಗ್ರತೆಯೊಂದಿಗೆ ರಾಜಿ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ವಿ0ವಾದಿತ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕೆಂಬ ರೈತರ ಬೇಡಿಕೆಯನ್ನು ಒಪ್ಪಿಕೊಂಡಂತೆ ಕೇಂದ್ರ ಸರ್ಕಾರ ಚೀನಿ ಆಕ್ರಮಣದ ಸತ್ಯವನ್ನು ಈಗಲಾದರೂ ಒಪ್ಪಿಕೊಳ್ಳಬೇಕು ಎಂದು ಗಾಂಧಿ ಟ್ವೀಟ್ ಮಾಡಿದ್ದಾರೆ.
ಪೂರ್ವ ಲಡಾಖ್ ನ ವಾಸ್ತವ ಗಡಿ ನಿಯಂತ್ರಣ ರೇಖೆ ಉದ್ದಕ್ಕೂ ನಡೆಯುತ್ತಿರುವ ಘರ್ಷಣೆಯನ್ನು ನಿಯಂತ್ರಿಸುವ ಸಂಬಂಧ ಭಾರತ ಮತ್ತು ಚೀನಾ 14ನೇ ಸುತ್ತಿನ ಮಿಲಿಟರಿ ಮಾತುಕತೆಗಳಲ್ಲಿ ಒಪ್ಪಿಕೊಂಡಿದೆ.
ಇತ್ತೀಚೆಗೆ ಹಿಮಾಚಲ ಪ್ರದೇಶದ ಗಡಿಭಾಗದಲ್ಲಿ ಚೀನಾ ಎರಡು ಗ್ರಾಮಗಳನ್ನು ನಿರ್ಮಿಸಿರುವ ಬಗ್ಗೆ ಎನ್.ಡಿ.ಟಿವಿ ವರದಿ ಮಾಡಿತ್ತು. ಕೇಂದ್ರ ಸರ್ಕಾರ ಈ ಬಗ್ಗೆ ಪ್ರತಿಕ್ರಿಯೆ ನೀಡದಿರುವ ಬಗ್ಗೆ ರಾಹುಲ್ ಗಾಂಧಿ ಗಮನ ಸೆಳೆದಿದ್ದಾರೆ.