ಬೆಂಗಳೂರಿಗೆ ಆಗಮಿಸಿ ನಾಪತ್ತೆಯಾಗಿರುವ ಹತ್ತು ಮಂದಿ ದಕ್ಷಿಣ ಆಫ್ರಿಕನ್ನರ ಪತ್ತೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.
ಪೊಲೀಸರು, ಸಂಪರ್ಕ ಪತ್ತೆ ತಂಡಗಳು ಮತ್ತು ಆರೋಗ್ಯ ಇಲಾಖೆಯ ಸಹಾಯದಿಂದ ಮಧ್ಯರಾತ್ರಿಯೊಳಗೆ ಅವರನ್ನು ಪತ್ತೆಹಚ್ಚಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜನರು ತಮ್ಮ ಮಾದರಿಗಳನ್ನು ಪರೀಕ್ಷೆಗೆ ನೀಡಿದರೆ ಅವರ ಮೊಬೈಲ್ ಫೋನ್ ಗಳು ಸ್ವಿಚ್ ಆಫ್ ಆಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರು ಸಹಕರಿಸದಿದ್ದರೆ ಮತ್ತು ಅವರ ಫೋನ್ ಸ್ವಿಚ್ ಆಫ್ ಮಾಡಿಕೊಂಡರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಮುಂದಿನ ದಿನಗಳಲ್ಲಿ ಏನು ಮಾಡಬೇಕು ಮತ್ತು ಪ್ರಕರಣಗಳನ್ನು ಹೇಗೆ ನಿಭಾಯಿಸಬೇಕು ಎಂದು ಸರಣಿ ಸಭೆಗಳಲ್ಲಿ ಚರ್ಚೆ ನಡೆಸಲಾಗಿದೆ. ಈ ಸಭೆಯಲ್ಲಿ 10 ಮಂದಿ ದಕ್ಷಿಣ ಆಫ್ರಿಕನ್ನರು ಬೆಂಗಳೂರಿನಲ್ಲಿ ಅಜ್ಞಾತವಾಸ ನಡೆಸಿರುವುದು ಬೆಳಕಿಗೆ ಬಂದಿದೆ.


