ದೆಹಲಿಯಲ್ಲಿ ಮೊದಲ ಒಮಿಕ್ರಾನ್ ರೂಪಾಂತರ ಸೋಂಕು ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ.
ರೋಗಿಯನ್ನು ಎಲ್.ಎನ್.ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವ್ಯಕ್ತಿ ಟಾಂಜಾನಿಯಾದಿಂದ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಕೊವಿಡ್ ಪರೀಕ್ಷೆ ನಡೆಸಿದಾಗ ಒಮಿಕ್ರಾನ್ ರೂಪಾಂತರ ವೈರಸ್ ಇರುವುದು ದೃಢಪಟ್ಟಿದೆ. 17 ಮಂದಿಯಲ್ಲಿ ಕೊರೊನ ಸೋಂಕು ದೃಢಪಟ್ಟಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಿದ್ದಾರೆ.
ದೆಹಲಿಯ ಮೊದಲ ಒಮಿಕ್ರಾನ್ ಪ್ರಕರಣದ ಕುರಿತು ಎಲ್.ಎನ್.ಜೆಪಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದು, ತಾಂಜಾನಿಯಾದಿಂದ ಹಿಂದಿರುಗಿದ ವ್ಯಕ್ತಿಯಲ್ಲಿ ಗಂಟಲು ನೋವು, ದೌರ್ಬಲ್ಯ, ದೇಹದ ನೋವು ಕಾಣಿಸಿಕೊಂಡಿದೆ. ಅವರ ಸಂಪರ್ಕಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಒಮಿಕ್ರಾನ್ ಸೋಂಕಿತ ಕೊವಿಡ್ ಲಿಸಿಕೆಯ ಎರಡೂ ಡೋಸ್ ಗಳನ್ನು ತೆಗೆದುಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಕರೋನ ವೈರಸ್ನ ಓಮಿಕ್ರಾನ್ ರೂಪಾಂತರ ಸೋಂಕಿತ ಮಹಾರಾಷ್ಟ್ರದ ಥಾಣೆ ಜಿಲ್ಲೆಯ 33 ವರ್ಷದ ವ್ಯಕ್ತಿ ಆರೋಗ್ಯವಾಗಿದ್ದಾರೆ ವೈದ್ಯಕೀಯ ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದಾರೆ ಎಂದು ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾಗರ ಎಂಜಿನಿಯರ್ ಪ್ರಸ್ತುತ ರಾಜ್ಯದ ರಾಜಧಾನಿ ಮುಂಬೈನಿಂದ ಸುಮಾರು 50 ಕಿಮೀ ದೂರದಲ್ಲಿರುವ ಕಲ್ಯಾಣ್ ಪಟ್ಟಣದ COVID-19 ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿವಿಧ ದೇಶಗಳಿಂದ ಥಾಣೆ ಜಿಲ್ಲೆಯ ಕಲ್ಯಾಣ್-ಡೊಂಬಿವ್ಲಿ ಪ್ರದೇಶಕ್ಕೆ ಆಗಮಿಸಿದ ನಂತರ ಕರೋನ ವೈರಸ್ ಪರೀಕ್ಷೆ ನಡೆಸಿದ ಇತರ ಆರು ಜನರ ಮಾದರಿಗಳನ್ನು ಜೀನೋಮ್ ಅನುಕ್ರಮಕ್ಕಾಗಿ ಕಳುಹಿಸಲಾಗಿದೆ ಮತ್ತು ಫಲಿತಾಂಶಗಳಿಗಾಗಿ ಕಾಯಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.


