ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ಸುಧಾ ಭಾರದ್ವಾಜ್ ಅವರಿಗೆ ನೀಡಿದ ಡೀಫಾಲ್ಟ್ ಜಾಮೀನು ಪ್ರಶ್ನಿಸಿ ಎನ್ಐಎ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ರವೀಂದ್ರ ಭಟ್ ಮತ್ತು ಬೇಲಾ ತ್ರಿವೇದಿ ಅವರಿದ್ದ ಪೀಠವು ಸುಧಾ ಅವರಿಗೆ ಜಾಮೀನು ನೀಡುವ ಬಾಂಬ್ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣವಿಲ್ಲ ಎಂದು ಎನ್ಐಎ ಮೇಲ್ಮನವಿ ತಿರಸ್ಕರಿಸಿತು.
ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಅಡಿಯಲ್ಲಿ ಸುಧಾ ಭಾರದ್ವಾಜ್ ಬಂಧನ ವಿಸ್ತರಿಸಲು ಸೆಷನ್ಸ್ ನ್ಯಾಯಾಲಯಕ್ಕೆ ಯಾವುದೇ ಅಧಿಕಾರವಿಲ್ಲ ಎಂಬ ಕಾರಣಕ್ಕೆ ಹೈಕೋರ್ಟ್ ಡಿಸೆಂಬರ್ 1 ರಂದು ಭಾರದ್ವಾಜ್ ಅವರಿಗೆ ಡೀಫಾಲ್ಟ್ ಜಾಮೀನು ನೀಡಿತ್ತು.
2008 ರ ಅಡಿ ಗೊತ್ತುಪಡಿಸಿದ ವಿಶೇಷ ನ್ಯಾಯಾಲಯವು ಅಸ್ತಿತ್ವದಲ್ಲಿದ್ದಾಗ, ಸೆಷನ್ಸ್ ನ್ಯಾಯಾಧೀಶರು ಬಂಧನವನ್ನು ನಿಗದಿತ 90 ದಿನಗಳ ನಂತರ ವಿಸ್ತರಿಸುವ ಅಧಿಕಾರ ಹೊಂದಿರಲಿಲ್ಲ ಎಂದು ಹೈಕೋರ್ಟ್ ಹೇಳಿತ್ತು. ಜೊತೆಗೆ ಸುಧಾ ಅವರ ಜಾಮೀನು ಷರತ್ತುಗಳು ಮತ್ತು ಬಿಡುಗಡೆಯ ದಿನಾಂಕವನ್ನು ನಿರ್ಧರಿಸಲು ಡಿಸೆಂಬರ್ 8ರಂದು ವಿಶೇಷ ಎನ್ಐಎ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನಿರ್ದೇಶಿಸಿದೆ.
ಕವಿ ವರವರ ರಾವ್, ಸುಧೀರ್ ಧವಳೆ, ವೆರ್ನಾನ್ ಗೊನ್ಸಾಲ್ವಿಸ್, ರೋನಾ ವಿಲ್ಸನ್, ಸುರೇಂದ್ರ ಗ್ಯಾಡ್ಲಿಂಗ್, ಶೋಮಾ ಸೇನ್, ಮಹೇಶ್ ರಾವುತ್ ಮತ್ತು ಅರುಣ್ ಫೆರೇರಾ ಅವರು ಸಲ್ಲಿಸಿದ ಡೀಫಾಲ್ಟ್ ಜಾಮೀನು ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿತು.
ಕವಿ ವರವರ ರಾವ್ ಪ್ರಸ್ತುತ ವೈದ್ಯಕೀಯ ಜಾಮೀನಿನ ಮೇಲೆ ಹೊರಗಿದ್ದಾರೆ.
ಎನ್ಐಎ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಅಮನ್ ಲೇಖಿ ಹಾಜರಾಗಿದ್ದರು.


