Monday, September 16, 2024
Google search engine
Homeಇತರೆಗುಬ್ಬಿ ಬಳಿ ಹೇಮಾವತಿ ನಾಲೆಗೆ ಹಾರಿ ಇಂಜಿನಿಯರ್, ಪತ್ನಿ ಮತ್ತು ವಿವಾಹಿತ ಪುತ್ರಿ ಆತ್ಮಹತ್ಯೆ

ಗುಬ್ಬಿ ಬಳಿ ಹೇಮಾವತಿ ನಾಲೆಗೆ ಹಾರಿ ಇಂಜಿನಿಯರ್, ಪತ್ನಿ ಮತ್ತು ವಿವಾಹಿತ ಪುತ್ರಿ ಆತ್ಮಹತ್ಯೆ

ಆತ್ಮಹತ್ಯೆ ಮಾಡಿಕೊಂಡವರನ್ನು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಮೇಶ್, ಪತ್ನಿ ಶಿಕ್ಷಕಿ ಮಮತಾ ಮತ್ತು ವಿವಾಹಿತ ಪುತ್ರಿ ದೀಪ(25) ಎಂದು ಗುರುತಿಸಲಾಗಿದೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಒಂದೇ ಕುಟುಂಬದ ಮೂವರು ಸಾಗರನಹಳ್ಳಿ ಗೇಟ್ ಮೂಲಕ ಹಾದುಹೋಗುವ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ರಾತ್ರಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಮೇಶ್, ಪತ್ನಿ ಶಿಕ್ಷಕಿ ಮಮತಾ ಮತ್ತು ವಿವಾಹಿತ ಪುತ್ರಿ ದೀಪ(25) ಎಂದು ಗುರುತಿಸಲಾಗಿದೆ.

ರಮೇಶ್ ಅವರು ಕೆ.ಬಿ.ಕ್ರಾಸ್ ನಲ್ಲಿರುವ ಹೇಮಾವತಿ ಕಚೇರಿಯಲ್ಲಿ ಎಇಇ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಬಿಳಿಗೆರೆಯಲ್ಲಿ ಮನೆ ಮಾಡಿಕೊಂಡು ಕೆಲಸಕ್ಕೆ ಹೋಗಿಬರುತ್ತಿದ್ದರು ಎಂದು ತಿಳಿದುಬಂದಿದೆ.

ರಮೇಶ್ ಅವರಿಗೆ ತುಮಕೂರಿನಲ್ಲಿ ಮನೆಯೊಂದು ಇದೆ ಎನ್ನಲಾಗಿದೆ.

ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಆದರೂ, ರಮೇಶ್ ದಂಪತಿ ಪುತ್ರಿ ದೀಪ ವಿವಾಹವಾಗಿ ಒಂದು ತಿಂಗಳಿಗೆ ಪತಿ ಆಕೆಯನ್ನು ತೊರೆದಿದ್ದರು ಎಂದು ಹೇಳಲಾಗಿದೆ.

ಡಿಸೆಂಬರ 16ರ ರಾತ್ರಿ 7 ಗಂಟೆ ಸಮಯದಲ್ಲಿ ನಾಲೆಗೆ ಹಾರಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ನಾಲೆಯಿಂದ ಈಗಾಗಲೇ ಎರಡು ಶವಗಳನ್ನು ಹೊರತೆಗೆಯಲಾಗಿದೆ. ಮತ್ತೊಂದು ಶವಕ್ಕಾಗಿ ಶೋಧ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular