Sunday, March 15, 2026
Google search engine
Homeಮುಖಪುಟಕಾಂಗ್ರೆಸ್ ಹಿರಿಯ ಮುಖಂಡ ಆರ್.ಎಲ್.ಜಾಲಪ್ಪ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಗಣ್ಯರು

ಕಾಂಗ್ರೆಸ್ ಹಿರಿಯ ಮುಖಂಡ ಆರ್.ಎಲ್.ಜಾಲಪ್ಪ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಗಣ್ಯರು

ಜಾಲಪ್ಪ ಅವರು ಹಿಂದುಳಿದವರ ಪರವಾಗಿ ಕೆಲಸ ಮಾಡಿದರು. ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿದರು. ಕೋಲಾರ ಭಾಗದಲ್ಲಿ ಸಾಕಷ್ಟ ಕೆಲಸ ಮಾಡಿದರು. ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟದವರೆಗೂ ಸಂಪರ್ಕ ಹೊಂದಿದ್ದರು.

ಹಿಂದುಳಿದ ವರ್ಗಗಳ ನಾಯಕ ಆರ್.ಎಲ್. ಜಾಲಪ್ಪ ನಿಧನರಾಗಿದ್ದು, ಇಂದು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಆರ್.ಎಲ್.ಜಾಲಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದೊಡ್ಡಬಳ್ಳಾಪುರದ ಆರ್.ಎಲ್. ಜಾಲಪ್ಪ ಶಿಕ್ಷಣ ಸಂಸ್ಥೆ ಆವರಣದಲ್ಲಿ ಇರಿಸಲಾಗಿದ್ದ ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾರ್ಥೀವ ಶರೀರಕ್ಕೆ ಶನಿವಾರ ಅಂತಿಮ ನಮನ ಸಲ್ಲಿಸಿದರು.

ಜಾಲಪ್ಪ ಅವರು ಹಿಂದುಳಿದವರ ಪರವಾಗಿ ಕೆಲಸ ಮಾಡಿದರು. ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿದರು. ಕೋಲಾರ ಭಾಗದಲ್ಲಿ ಸಾಕಷ್ಟ ಕೆಲಸ ಮಾಡಿದರು. ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟದವರೆಗೂ ಸಂಪರ್ಕ ಹೊಂದಿದ್ದರು.

ಶಿಕ್ಷಣ , ಆರೋಗ್ಯ ಕ್ಷೇತ್ರಗಳಿಗೆ ವಿಶಿಷ್ಟ ಕೊಡುಗೆ ನೀಡಿದ್ದಾರೆ. ರಾಜ್ಯ ಮತ್ತು ಕೇಂದ್ರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಜನತಾ ಪರಿವಾರದ ಹಿರಿಯ ನಾಯಕರಾಗಿದ್ದ ಜಾಲಪ್ಪ 1996ರಲ್ಲಿ ಎಚ್.ಡಿ.ದೇವೇಗೌಡ ಪ್ರಧಾನಿಯಾಗಿದ್ದಾಗ ಅವರ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular