ದೆಹಲಿಯ ರೋಹಿಣಿ ಜಿಲ್ಲಾ ನ್ಯಾಯಾಲಯದ ಸಂಕೀರ್ಣದೊಳಗೆ ಸಂಭವಿಸಿದ ಸ್ಫೋಟ ಪ್ರಕರಣದ ಆರೋಪಿ ಡಿಆರ್.ಡಿಒ ವಿಜ್ಞಾನಿ ಕಟಾರಿಯಾರನ್ನು ಬಂಧಿಸಿದ ಬಳಿಕ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಅವರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ವಿಜ್ಞಾನಿ ಭರತ್ ಭೂಷಣ್ ಕಟಾರಿಯಾ ತನ್ನ ನೆರೆಯ ವಕೀಲರೊಬ್ಬರನ್ನು ಹತ್ಯೆಗೈಯ್ಯಲು ಬಾಂಬ್ ಇಟ್ಟಿದ್ದ. ಬಾಂಬ್ ಸ್ಫೋಟಿಸಿ ಓರ್ವ ವ್ಯಕ್ತಿ ಗಾಯಗೊಂಡಿದ್ದರು. ಬಳಿಕ ತನಿಖೆ ನಡೆಸಿದ ಪೊಲೀಸರು ಕಟಾರಿಯಾ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ
ಶನಿವಾರ ರಾತ್ರಿ ಕಟಾರಿಯಾ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಅವರನ್ನು ಸಮೀಪದ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆತನ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಟಾರಿಯಾ ಪ್ರಶ್ನಿಸುವುದನ್ನು ತಪ್ಪಿಸಿಕೊಳ್ಳುತ್ತಿದ್ದು, ಪೊಲೀಸರನ್ನು ದಾರಿ ತಪ್ಪಿಸುತ್ತಿದ್ದಾರೆ. ಶನಿವಾರ ರಾತ್ರಿ ಭರತ್ ಅವರು ವಾಶ್ರೂಮ್ನಲ್ಲಿ ಸ್ವಲ್ಪ ದ್ರವ ಸೇವಿಸಿರುವುದನ್ನು ಕಂಡುಕೊಂಡಿದ್ದೇವೆ. ಅವರು ಆತ್ಮಹತ್ಯೆ ಮಾಡಿಕೊಳ್ಳಲು ಬಯಸಿದ್ದರು. ಆದ್ದರಿಂದ ಆಸ್ಪತ್ರೆಗೆ ಸಾಗಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
ನಾವು ವೈದ್ಯರೊಂದಿಗೆ ಮಾತನಾಡಿದ್ದೇವೆ ಮತ್ತು ಅವರು ಹ್ಯಾಂಡ್ವಾಶ್ ಸೇವಿಸಿದ್ದಾರೆ. ಪರೀಕ್ಷೆ ನಡೆಸಿದ ನಂತರ ಅವರನ್ನು ಬಿಡುಗಡೆ ಮಾಡಲಾಗುವುದು. ಶೀಘ್ರವೇ ಆತನನ್ನು ವಿಚಾರಣೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ.
ವಶಿಷ್ಟ್ ಅವರು ಕಟಾರಿಯಾ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ವಶಿಷ್ಟ್ ಮತ್ತು ಕಟಾರಿಯಾ ನಡುವೆ 10 ವರ್ಷಗಳ ದೀರ್ಘಕಾಲದ ವಿವಾದವಿದೆ. ಹೀಗಾಗಿ ಪರಸ್ಪರರ ವಿರುದ್ಧ 12ಕ್ಕೂ ಹೆಚ್ಚು ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ರಾಜೀವ್ ರಂಜನ್ ಸಿಂಗ್ ಹೇಳಿಕೆ ಉಲ್ಲೇಖಿಸಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.