Saturday, March 7, 2026
Google search engine
Homeಮುಖಪುಟಬಸವ ಪ್ರತಿಮೆಗೆ ಮಸಿ - ಆರೋಪಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ - ಕರವೇ ಆಗ್ರಹ

ಬಸವ ಪ್ರತಿಮೆಗೆ ಮಸಿ – ಆರೋಪಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ – ಕರವೇ ಆಗ್ರಹ

ಜಗತ್ತಿನ ಶ್ರೇಷ್ಠ ಕ್ರಾಂತಿ ಬಸವ ಕ್ರಾಂತಿ, ಯಾರನ್ನೂ ದ್ವೇಷಿಸದೇ, ದಯವೇ ಧರ್ಮದ ಮೂಲವಯ್ಯ ಎಂದು ಸಕಲರನ್ನು ಬಿಗಿದಪ್ಪಿದ ಮಹಾನ್ ಚೇತನಕ್ಕೆ ಮಸಿ ಬಳಿದ ಜನರ ಸಂಸ್ಕೃತಿ ಎಂತದ್ದೆನ್ನುವುದು ಸಮಾಜ ಅರ್ಥಮಾಡಿಕೊಳ್ಳಬೇಕಿದೆ. ಬಸವಣ್ಣ ಬದುಕಿದ್ದಿದ್ದರೆ ಇವರ ದ್ವೇಷ, ಅಸಹನೆ ಕಂಡು ಅನುಕಂಪಪಡುತ್ತಿದ್ದರು, ಮರುಗುತ್ತಿದ್ದರು ಎಂದಿದ್ದಾರೆ.

ಮಾತನಾಡಿದ್ದು ಸಾಕು, ಹೇಳಿಕೆಗಳನ್ನು ಕೇಳಿ ಸಾಕಾಗಿದೆ. ಸರ್ಕಾರ ಈಗಲಾದರೂ ಕಾರ್ಯೋನ್ಮುಕವಾಗಬೇಕು. ಮುಂದಿನ 24 ಗಂಟೆಯಲ್ಲಿ ಈ ದುಷ್ಕೃತ್ಯ ಎಸಗಿದ ಅಪರಾಧಿಗಳನ್ನ ಸರ್ಕಾರ ಬಂಧಿಸಿ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವರನ್ನು ಗಡಿಪಾರು ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದ್ದಾರೆ.

ಬಸವಣ್ಣನವರ ಮೇಲೆ ಈ ಸರ್ಕಾರಕ್ಕೆ ಕಿಂಚಿತ್ತು ಗೌರವ ಇದ್ದರೆ ಈ ಕೆಲಸ ತುರ್ತಾಗಿ ಮಾಡಲಿ ಎಂದು ಹೇಳಿದ್ದಾರೆ.

ಸಾಮಾಜಿಕ ಕ್ರಾಂತಿ, ಧಾರ್ಮಿಕ ಕ್ರಾಂತಿ, ಸಮತಾವಾದದ ಹರಿಕಾರ ವಿಶ್ವ ಗುರು ಬಸವಣ್ಣನವರಿಗೆ ಬೆಳಗಾವಿಯ ಜಿಲ್ಲೆಯ ಖಾನಾಪುರದ ಹಲಸಿಯಲ್ಲಿ ನೀಚ ಎಂಇಎಸ್ ಮತ್ತು ಶಿವಸೇನೆ ಭಯೋತ್ಪಾದಕರು ಮಸಿ ಬಳಿದು ಸಮಸ್ತ ಮಾನವ ಕುಲಕ್ಕೆ ಅವಮಾನ ಎಸೆಗಿದ್ದಾರೆ. ಈ ಕೃತ್ಯವನ್ನ ಎಲ್ಲ ಕನ್ನಡಿಗರು ಖಂಡಿಸಬೇಕು. ಇದನ್ನು ನಾವು ಕ್ಷಮಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಜಗತ್ತಿನ ಶ್ರೇಷ್ಠ ಕ್ರಾಂತಿ ಬಸವ ಕ್ರಾಂತಿ, ಯಾರನ್ನೂ ದ್ವೇಷಿಸದೇ, ದಯವೇ ಧರ್ಮದ ಮೂಲವಯ್ಯ ಎಂದು ಸಕಲರನ್ನು ಬಿಗಿದಪ್ಪಿದ ಮಹಾನ್ ಚೇತನಕ್ಕೆ ಮಸಿ ಬಳಿದ ಜನರ ಸಂಸ್ಕೃತಿ ಎಂತದ್ದೆನ್ನುವುದು ಸಮಾಜ ಅರ್ಥಮಾಡಿಕೊಳ್ಳಬೇಕಿದೆ. ಬಸವಣ್ಣ ಬದುಕಿದ್ದಿದ್ದರೆ ಇವರ ದ್ವೇಷ, ಅಸಹನೆ ಕಂಡು ಅನುಕಂಪಪಡುತ್ತಿದ್ದರು, ಮರುಗುತ್ತಿದ್ದರು ಎಂದಿದ್ದಾರೆ.

ಖಾನಾಪುರದ ಹಲಸಿ ಹಿಂದೊಮ್ಮೆ ಕನ್ನಡಿಗರ ಬೃಹತ್ ಕದಂಬ ಸಾಮ್ರಾಜ್ಯದ ರಾಜಧಾನಿಯಾಗಿತ್ತು. ಅಂತಹ ಕನ್ನಡಿಗರ ಪವಿತ್ರ ಭೂಮಿಯಲ್ಲಿ ವಿಶ್ವಗುರು ಬಸವಣ್ಣನವರಿಗಾದ ಅವಮಾನ ಸಹಿಸಲು ಅಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾನ್ ಮಾನವತಾವಾದಿಗೆ ಅವಮಾನ ಮಾಡಿದ ನೀಚರಿಗೆ ಎಂತಹ ಘೋರ ಶಿಕ್ಷೆ ನೀಡಿದರೂ ಕಡಿಮೆಯೆ. ಸರ್ಕಾರ ಇವರನ್ನು ಶಿಕ್ಷಿಸದಿದ್ದರೆ, ಜನರೇ ಶಿಕ್ಷಿಸುವ ಕಾಲ ಬಂದಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular