ಕ್ರಿಸ್ಮಸ್ ಆಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಕ್ರಿಸ್ಮಸ್ ಶುಭಾಶಯಗಳನ್ನು ಕೋರಿದ್ದಾರೆ. ಎಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳು ಎಂದು ಹೇಳಿದ್ದಾರೆ.
ಸೇವೆ, ದಯೆ ಮತ್ತು ನಮ್ರತೆಗೆ ಹೆಚ್ಚಿನ ಒತ್ತು ನೀಡಿದ ಯೇಸು ಕ್ರಿಸ್ತನ ಜೀವನ ಮತ್ತು ಉದಾತ್ತ ಬೋಧನೆಗಳನ್ನು ನಾವು ನೆನಪಿಸಿಕೊಳ್ಳುತ್ತೇವೆ. ಎಲ್ಲರು ಆರೋಗ್ಯವಂತರಾಗಿ ಮತ್ತು ಸಮೃದ್ಧಿಯಾಗಿರಲಿ, ಸುತ್ತಲೂ ಸಾಮರಸ್ಯವಿರಲಿ ಎಂದು ಹೇಳಿದ್ದಾರೆ.
ಶಾಂತಿ, ಪ್ರೀತಿ, ದಯೆ ಮತ್ತು ಕ್ಷಮಾ ಗುಣಗಳಿಂದ ಮಾಡುವ ಜನರ ಸೇವೆಯಿಂದ ದೇವರನ್ನು ಕಾಣಲು ಸಾಧ್ಯ ಎಂಬ ಜೀಸಸ್ ಕ್ರೈಸ್ತನ ಅರ್ಥಪೂರ್ಣ ಸಂದೇಶ ನಮ್ಮ ದಾರಿಗೆ ಬೆಳಕಗಾಗಿ ನಮ್ಮನ್ನು ಮುನ್ನಡೆಸಲಿ. ನಾಡಿನ ಕ್ರೈಸ್ತ ಬಂಧುಗಳಿಗೆ ಹಾರ್ದಿಕ ಶುಭಾಶಯಗಳು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಎಲ್ಲರಿಗೂ ಆರೋಗ್ಯ, ಸಂತೋಷ ಮತ್ತು ಸೌಹಾರ್ದತೆ ಉಂಟುಮಾಡಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ರಿಸ್ಮಸ್ ಶುಭ ಕೋರಿದ್ದಾರೆ.
ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಕ್ರಿಸ್ಮಸ್ ಶುಭಾಶಯ ಕೋರಿದ್ದಾರೆ. ದಯೆ, ಶಾಂತಿ, ಪ್ರೀತಿ ಮತ್ತು ಸಾಮರಸ್ಯದ ಸದ್ಗುಣಗಳು ಯಾವಾಗಲೂ ಮೇಲುಗೈ ಸಾಧಿಸಲಿ. ಮೆರಿ ಕ್ರಿಸ್ಮಸ್! ಹೇಳಿದ್ದಾರೆ.
ನಾಡಿನ ಎಲ್ಲ ಕ್ರೈಸ್ತ ಬಂಧುಗಳಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳು. ಸಮಾಜದ ಎಲ್ಲ ಸಂಕಷ್ಟಗಳನ್ನು ಕಳೆದು, ಎಲ್ಲರಿಗೂ ಉತ್ತಮ ಆರೋಗ್ಯ, ಸುಖ, ಸಮೃದ್ಧಿ, ಯಶಸ್ಸುಗಳನ್ನು ದೇವರು ನೀಡಲಿ, ಎಲ್ಲೆಡೆ ಶಾಂತಿ ನೆಲೆಸಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಾರ್ಥಿಸಿದ್ದಾರೆ.
ನಾಡಿನ ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು. ಯೇಸು ಕ್ರಿಸ್ತರ ತತ್ವಗಳು ಜಗತ್ತಿನಾದ್ಯಂತ ಅಪಾರ ಜ್ಞಾನ, ಅರಿವು ಮತ್ತು ಸಂತಸ ಹರಡಿದೆ. ಈ ಸುದಿನದಂದು ಎಲ್ಲರ ಬಾಳಿನಲ್ಲಿ ಸುಖ-ಸಂತೋಷ ಮತ್ತು ನಿಮ್ಮದು ಮೂಡಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರಾರ್ಥಿಸಿದ್ದಾರೆ.


