Friday, September 20, 2024
Google search engine
Homeಮುಖಪುಟಬಾಗಿಲಕೋಟೆ : 500 ಕೆ.ಜಿ. ಸ್ಪೋಟಕ ವಶ - ಇಬ್ಬರ ಬಂಧನ

ಬಾಗಿಲಕೋಟೆ : 500 ಕೆ.ಜಿ. ಸ್ಪೋಟಕ ವಶ – ಇಬ್ಬರ ಬಂಧನ

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರನ್ನು ವಿಜಯ್ (30), ಮಂಜುನಾಥ್ (30) ಎಂದು ಗುರುತಿಸಲಾಗಿದ್ದು, ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

ತೋಟದ ಮನೆಯೊಂದರಲ್ಲಿ ಸಂಗ್ರಹಿಸಿ ಇಡಲಾಗಿದ್ದ ಬೃಹತ್ ಪ್ರಮಾಣದ ಸ್ಫೋಟಗಳನ್ನು ಬಾಗಲಕೋಟೆ ಗ್ರಾಮಾಂತರ ಪೊಲೀಸರು ಪತ್ತೆ ಮಾಡಿದ್ದಾರೆ. ಬಾಗಲಕೋಟೆಗೆ ಸಮೀಪದ ಹೊನ್ನಕಟ್ಟಿ ಗ್ರಾಮದ ಹೊರವಲಯದ ತೋಟದ ಮನೆಯಲ್ಲಿ ಅಪಾರ ಪ್ರಮಾಣದ ಸ್ಫೋಟಕ ಪತ್ತೆಯಾಗಿರುವುದು ಜನರನ್ನು ಭೀತರನ್ನಾಗಿಸಿದೆ.

ಖಚಿತ ಮಾಹಿತಿ ಮೇರೆಗೆ ಬಾಗಲಕೋಟೆ ಗ್ರಾಮಾಂತರ ಪೊಲೀಸರು ತೋಟದ ಮನೆ ಮೇಲೆ ದಾಳಿ ನಡೆಸಿ ತೋಟದ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 500 ಕೆ.ಜಿ.ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬು ಮಾಧ್ಯಮಗಳು ವರದಿ ಮಾಡಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರನ್ನು ವಿಜಯ್ (30), ಮಂಜುನಾಥ್ (30) ಎಂದು ಗುರುತಿಸಲಾಗಿದ್ದು, ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

250 ಕೆಜಿ. ಗನ್ ಪೌಡರ್, 150 ಕೆಜಿ ಸೋಡಿಯಂ ನೈಟ್ರೇಟ್, 52 ಕೆ.ಜಿ. ಇದ್ದಿಲ ಪುಡಿ ಮತ್ತು 50 ಕೆಜಿ ಸಲ್ಫರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸ್ಫೋಟಗಳನ್ನು ಅಕ್ರಮವಾಘಿ ಸಂಗ್ರಹಿಸಿ ಇಡಲಾಗಿದೆ. ಸುತ್ತಮುತ್ತಲಿನ ಗ್ರಾನೈಟ್ ಗಳು ಮತ್ತು ಕಲ್ಲು ಕ್ವಾರಿಗಳಿಗೆ ಪೂರೈಕೆ ಮಾಡಲಾಗಿದೆ ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಸ್ಫೋಟಕಗಳನ್ನು ಪೂರೈಸಲು ಯಾವುದೇ ಪರವಾನಗಿ ಹೊಂದಿಲ್ಲ. ಇಬ್ಬರನ್ನು ಬಂಧಿಸಿದ್ದು ಶೀಘ್ರವೇ ಪ್ರಮುಖ ಆರೋಪಿಯನ್ನು ಬಂಧಿಸುತ್ತೇವೆ. ಸ್ಫೋಟಕಗಳ ಮೂಲವನ್ನು ಇನ್ನೂ ಪತ್ತೆ ಮಾಡಲಾಗಿಲ್ಲ ಮತ್ತು ತನಿಖೆ ನಡೆಯುತ್ತಿದೆ ಎಂದು ಎಸ್ಪಿ ಲೋಕೇಶ್ ಜಗಲಾಸರ್ ಹೇಳಿಕೆಯನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular